Webdunia - Bharat's app for daily news and videos

Install App

ಜಲ್ಲಿಕಟ್ಟುಗೆ ಸುಪ್ರೀಂ ಅನುಮತಿ : ಕಂಬಳಕ್ಕೂ ಗ್ರೀನ್ ಸಿಗ್ನಲ್

Webdunia
ಸೋಮವಾರ, 22 ಮೇ 2023 (12:22 IST)
ನವದೆಹಲಿ : ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ ಇದ್ದ ಕಂಟಕ ನಿವಾರಣೆಯಾಗಿದೆ. ನ್ಯಾಯಮೂರ್ತಿ ಕೆ.ಎಂ.ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಸಂವಿಧಾನ ಪೀಠವು ಎತ್ತುಗಳ ನೋವು ಮತ್ತು ಸಂಕಟವನ್ನು ಕಡಿಮೆ ಮಾಡಲು ಕಾಯ್ದೆಯ ತಿದ್ದುಪಡಿ ಮಾಡಲಾಗಿದೆ.

ನಿಯಮದ ಅನುಸಾರ ಜಲ್ಲಿಕಟ್ಟು ಮುಂದುವರೆಸಬಹುದು ಎಂದು ಅಭಿಪ್ರಾಯಪಟ್ಟಿದೆ.  ರಾಜ್ಯದ ಕಾಯ್ದೆಯಲ್ಲಿ ಯಾವುದೇ ಲೋಪವಿಲ್ಲ. ನಿಯಮಗಳ ಪ್ರಕಾರ ಭಾಗವಹಿಸುವಿಕೆಯನ್ನು ಅನುಮತಿಸಲಾಗುವುದು.

ಕಾಯ್ದೆಯೂ ಸಂವಿಧಾನದ 48 ನೇ ವಿಧಿ ಗೋಹತ್ಯೆ ವಿಚಾರಕ್ಕೆ ಇದು ಸಂಬಂಧಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ನಡೆಸಲಾಗುವ ಕಂಬಳ ಮತ್ತು ಎತ್ತಿನ ಬಂಡಿ ಓಟಕ್ಕೂ ಅನುಮತಿಸುವ ಕಾನೂನನ್ನು ನ್ಯಾಯಾಲಯ ಎತ್ತಿಹಿಡಿದಿದೆ.

ಈ ಮೇಲೆ ಉಲ್ಲೇಖಿಸಲಾದ ಕ್ರೀಡೆಗಳು, ಆರ್ಟಿಕಲ್ 51ಎ(ಜಿ) ಎಲ್ಲಾ ಜೀವಿಗಳ ಮೇಲೆ ಸಹಾನೂಭೂತಿ ಹೊಂದಿರುವುದು ಮತ್ತು 51ಎ(ಹೆಚ್) ಹಿಂಸೆಯನ್ನು ನಡೆಸದೇ ಇರುವುದನ್ನು ಉಲ್ಲಂಘಿಸುವುದಿಲ್ಲ.

ಹೀಗಾಗಿ ಭಾರತದ ಸಂವಿಧಾನದ 14 ಮತ್ತು 21 ನೇ ವಿಧಿಗಳಲ್ಲಿನ ಮೂಲಭೂತ ಹಕ್ಕುಗಳನ್ನು ಇದು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ ತಿದ್ದುಪಡಿ ಮಾಡಲಾದ ಕಾಯಿದೆಗಳು ಹಾಗೂ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಈ ಅನುಷ್ಠಾನ ಜಿಲ್ಲಾಧಿಕಾರಿಗಳ ಜವಬ್ದಾರಿಯಾಗಿದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments