Webdunia - Bharat's app for daily news and videos

Install App

ಪ್ರಮಾಣ ವಚನ ಸ್ವೀಕಾರದ ಮರುದಿನವೇ ರಾಜೀನಾಮೆ ವದಂತಿಗಳಿಗೆ ತೆರೆ ಎಳೆದ ಸುರೇಶ್ ಗೋಪಿ

Krishnaveni K
ಸೋಮವಾರ, 10 ಜೂನ್ 2024 (15:51 IST)
ತ್ರಿಶ್ಶೂರ್: ಪ್ರಮಾಣ ವಚನ ಮರುದಿನವೇ ತ್ರಿಶ್ಶೂರ್ ನ ಬಿಜೆಪಿ ಸಂಸದ, ನಟ ಸುರೇಶ್ ಗೋಪಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಇದೀಗ ಆ ವದಂತಿಗಳಿಗೆ ಸುರೇಶ್ ಗೋಪಿ ತೆರೆ ಎಳೆದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಬಗ್ಗೆ ಸುದ್ದಿಗಳು ಸುಳ್ಳು ಎಂದಿದ್ದಾರೆ. ತಾನು ರಾಜೀನಾಮೆ ನೀಡುತ್ತಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ. ‘ಕೆಲವು ಮಾಧ್ಯಮಗಳಲ್ಲಿ ನಾನು ರಾಜೀನಾಮೆ ನೀಡಲಿರುವುದಾಗಿ ವರದಿಯಾಗುತ್ತಿದೆ. ಇದು ಶುದ್ಧ ಸುಳ್ಳು. ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿರುವುದು ಮತ್ತು ಕೇರಳವನ್ನು ಪ್ರತಿನಿಧಿಸುತ್ತಿರುವುದು ನನಗೆ ಹೆಮ್ಮೆಯ ವಿಷಯ. ಮೋದಿಜಿಯವರ ಮಾರ್ಗದರ್ಶನದಲ್ಲಿ ನಾವು ಕೇರಳದ ಅಭಿವೃದ್ಧಿಗಾಗಿ ದುಡಿಯಲು ನಾನು ಬದ್ಧನಾಗಿದ್ದೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಮಾಣ ವಚನ ಸ್ವೀಕಾರದ ಮರುದಿನವೇ ಸುರೇಶ್ ಗೋಪಿ ರಾಜೀನಾಮೆಗೆ ಮುಂದಾಗಿ್ದಾರೆ ಎಂದು ಸುದ್ದಿಯಾಗಿತ್ತು. ‘ನಾನು ನಮ್ಮ ನಾಯಕರ ಬಳಿ ನನಗೆ ಈ ಸಚಿವ ಸ್ಥಾನ ಬೇಡವೆಂದು ಹೇಳುತ್ತೇನೆ. ಯಾಕೆಂದರೆ ನಾನು ತ್ರಿಶ್ಶೂರ್ ಜನರ ಸಮಸ್ಯೆಗಳಿಗೆ ಕೇವಲ ಒಬ್ಬ ಸಂಸದನಾಗಿ ಕೆಲಸ ಮಾಡಬೇಕಿದೆ. ಅಲ್ಲದೆ, ನಾನು ಕೆಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದೆ. ಅವುಗಳನ್ನು ಮುಗಿಸಬೇಕಿದೆ. ಇವುಗಳ ನಡುವೆ ಸಚಿವ ಸ್ಥಾನದ ಜವಾಬ್ಧಾರಿ ನನಗೆ ಬೇಡ’ ಎಂದು ಸುರೇಶ್ ಗೋಪಿ ಹೇಳಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಸ್ವತಃ ಸುರೇಶ್ ಗೋಪಿ ಈ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments