Webdunia - Bharat's app for daily news and videos

Install App

ಸುರೇಶ್ ಗೋಪಿ ನೀಡಿದ ಪತ್ರ ಬಿಸಾಕಿದ ಅಮಿತ್ ಶಾ: ಸಿನಿಮಾಗಾಗಿ ಕೇಂದ್ರ ಸಚಿವ ಸ್ಥಾನ ಬಿಡಲೂ ಸಿದ್ಧ ಎಂದ ನಟ

Krishnaveni K
ಗುರುವಾರ, 22 ಆಗಸ್ಟ್ 2024 (13:31 IST)
ನವದೆಹಲಿ: ಕೇರಳದಿಂದ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಸುರೇಶ್ ಗೋಪಿಗೆ ಈಗ ಸಿನಿಮಾದಲ್ಲಿ ನಟಿಸುವಾಸೆ. ಈ ಬಗ್ಗೆ ಅಮಿತ್ ಶಾ ಬಳಿ ಒಪ್ಪಿಗೆ ಕೇಳಿದಾಗ ಅವರು ಪತ್ರವನ್ನೇ ಕಿತ್ತೆಸೆಸಿದ್ದಾರಂತೆ. ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಗೋಪಿ ನಟನೆಗಾಗಿ ಮಂತ್ರಿಗಿರಿ ಬಿಡಲೂ ಸಿದ್ಧ ಎಂದಿದ್ದಾರೆ.

ಕೇಂದ್ರದಲ್ಲಿ ರಾಜ್ಯ ಖಾತೆ ಸಹಾಯಕ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸುರೇಶ್ ಗೋಪಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಬಳಿಕ ಅವರೇ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಬೇಕಾಗಿ ಬಂತು. ಇದೀಗ ಸುರೇಶ್ ಗೋಪಿಗೆ ತಾವು ಒಪ್ಪಿಕೊಂಡ ಸಿನಿಮಾಗಳ ಮುಗಿಸುವ ಸಂಕಟ ಎದುರಾಗಿದೆ.

ಹೀಗಾಗಿ ಅಮಿತ್ ಶಾ ಮುಂದೆ ಹೋಗಿ ನಾನು ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಬಹುದೇ ಎಂದು ಮನವಿ ಪತ್ರ ಹಿಡಿದು ಹೋಗಿದ್ದರಂತೆ. ಪತ್ರ ನೋಡಿದ ಅಮಿತ್ ಶಾ, ಎಷ್ಟು ಸಿನಿಮಾ ಮಾಡಬೇಕಿದೆ ಎಂದು ಕೇಳಿದರಂತೆ. ಇದಕ್ಕೆ ಗೋಪಿ 20-22 ಸಿನಿಮಾ ಎಂದಿದ್ದಾರೆ. ಇದನ್ನು ಕೇಳಿ ಅಮಿತ್ ಶಾ ಪತ್ರವನ್ನೇ ಬಿಸಾಕಿದರಂತೆ.

ಇದೀಗ ಮಾಧ್ಯಮಗಳೊಂದಿಗೆ ಮಾತನಾಡಿರುವ ಸುರೇಶ್ ಗೋಪಿ ‘ಸಿನಿಮಾ ನನ್ನ ಪ್ಯಾಶನ್. ಒಂದು ವೇಳೆ ಸಿನಿಮಾಗಾಗಿ ಮಂತ್ರಿಗಿರಿ ಬಿಡಿ ಎಂದರೆ ಖುಷಿಯಿಂದ ಬಿಡುತ್ತೇನೆ. ಆದರೆ ನನಗೆ ಸಿನಿಮಾದಲ್ಲಿ ನಟಿಸಲು ಒಪ್ಪಿಗೆ ಸಿಗಬಹುದು ಎಂಬ ಭರವಸೆಯಿದೆ. ನನ್ನ ಮಂತ್ರಿ ಪದವಿ ನಿರ್ವಹಿಸಲು ನಾಲ್ವರು ಅಧಿಕಾರಿಗಳನ್ನು ಇಟ್ಟುಕೊಂಡಿದ್ದೇನೆ. ಇದು ಸಿನಿಮಾ ಶೂಟಿಂಗ್ ಸೆಟ್ ನಲ್ಲೂ ಮುಂದುವರಿಯಲಿದೆ’ ಎಂದಿದ್ದಾರೆ. ಅವರ ಈ ಮಾತುಗಳು ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments