ಔಷಧಿ ಇಲ್ಲದೆ ಶಸ್ತ್ರಚಿಕಿತ್ಸೆ ಸ್ಥಗಿತ !

Webdunia
ಬುಧವಾರ, 30 ಮಾರ್ಚ್ 2022 (08:56 IST)
ಕೊಲಂಬೊ : ಆರ್ಥಿಕ ಮುಗ್ಗಟ್ಟು, ವಿದೇಶಿ ವಿನಿಮಯ ಕೊರತೆ ಕಾರಣ ವಿದೇಶಗಳಿಂದ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲಾಗದ ಸ್ಥಿತಿಯಲ್ಲಿರುವ ಶ್ರೀಲಂಕಾದಲ್ಲಿ ಇದೀಗ ಆಸ್ಪತ್ರೆಗಳು ಶಸ್ತ್ರಚಿಕಿತ್ಸೆಯನ್ನೇ ಸ್ಥಗಿತಗೊಳಿಸುವ ಹಂತಕ್ಕೆ ತಲುಪಿವೆ.

ಲಂಕಾದ ಪ್ರಮುಖ ನಗರಗಳ ಪೈಕಿ ಒಂದಾದ ಕ್ಯಾಂಡಿ ನಗರದ ಪೆರಿಡೆನಿಯಾ ಆಸ್ಪತ್ರೆಯಲ್ಲಿ ಸೋಮವಾರದಿಂದಲೇ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನೂ ಸ್ಥಗಿತಗೊಳಿಸಿ ಪ್ರಕಟಣೆ ಹೊರಡಿಸಲಾಗಿದೆ.

ಈ ಕುರಿತು ಸೋಮವಾರ ಸುತ್ತೋಲೆ ಹೊರಡಿಸಿರುವ ಆಸ್ಪತ್ರೆಯ ನಿರ್ದೇಶಕರು ‘ಅರಿವಳಿಕೆ ನೀಡಲು ಬಳಸುವ ಕೆಲ ಔಷಧ, ಶಸ್ತ್ರಚಿಕಿತ್ಸೆಗೆ ಬೇಕಾದ ಉಪಕರಣ ಮತ್ತು ಕೆಲ ಔಷಧಗಳು ಅಲಭ್ಯವಾಗಿರುವ ಕಾರಣ, ನಾವು ಸೋಮವಾರ ದಾಖಲಾಗಿರುವ ರೋಗಿಗಳೂ ಸೇರಿದಂತೆ ಯಾರಿಗೂ ಶಸ್ತ್ರಚಿಕಿತ್ಸೆ ಕೈಗೊಳ್ಳದೇ ಇರುವ ನಿರ್ಧಾರ ಕೈಗೊಂಡಿದ್ದೇವೆ’ ಎಂದು ತಿಳಿಸಿದ್ದಾರೆ.

ತನ್ನ ಬಹುತೇಕ ಅಗತ್ಯಕ್ಕೆ ವಿದೇಶಗಳನ್ನೇ ನಂಬಿರುವ ಶ್ರೀಲಂಕಾ ಇದೀಗ ಸಾಲದ ಸುಳಿಯಲ್ಲಿ ಮುಳುಗಿದೆ. ಆದಾಯದ ಮೂಲವಾದ ಪ್ರವಾಸೋದ್ಯಮ ಮಲಗಿದೆ. ಪರಿಣಾಮ ವಿದೇಶಿ ವಿನಿಮಯ ಪೂರ್ತಿ ಕರಗಿ ಹೋಗಿದೆ. ವಿದೇಶಗಳಿಂದ ವಸ್ತುಗಳ ಖರೀದಿಗೂ ಹಣವಿಲ್ಲದಾಗಿದೆ.

ಪರಿಣಾಮ ದೇಶದಲ್ಲಿ ಪ್ರತಿಯೊಂದು ವಸ್ತುವಿನ ಬೆಲೆಯೂ ಗಗನಕ್ಕೇರಿದ್ದು, ಜನಸಾಮಾನ್ಯರ ಬದುಕು ಹೈರಾಣಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments