Webdunia - Bharat's app for daily news and videos

Install App

ಸೀಮಿತ ದಾಳಿ ಬಹಿರಂಗ ಚರ್ಚೆ ಅನಗತ್ಯ: ಮಲ್ಲಿಕಾರ್ಜನ್ ಖರ್ಗೆ

Webdunia
ಗುರುವಾರ, 6 ಅಕ್ಟೋಬರ್ 2016 (14:12 IST)
ಮಿಟಿಟರಿ ಆಪರೇಶನ್ ಕುರಿತು ಬಹಿರಂಗವಾಗಿ ಚರ್ಚಿಸುವುದು ಬೇಡ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಭಾರತೀಯ ಯೋಧರು ನಡೆಸಿದ ದಾಳಿಗೆ ಈಗಾಗಲೇ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಯೋಧರು ನಡೆಸಿದ ಆಪರೇಶನ್ ಕುರಿತು ಬಹಿರಂಗವಾಗಿ ಚರ್ಚಿಸಬಾರದು. ದೇಶ ರಕ್ಷಣೆಗಾಗಿ ನಮ್ಮ ಸೈನಿಕರು ತಮ್ಮ ಪ್ರಾಣವನ್ನು ಮುಡುಪಾಗಿಟ್ಟಿದ್ದಾರೆ. ಅಂತಿಮವಾಗಿ ನಮಗೆ ದೇಶವೇ ಮುಖ್ಯವಾಗುತ್ತದೆ ಎಂದರು. 
 
ದೇಶದ ಭದ್ರತೆ ದೃಷ್ಟಿಯಿಂದ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಭಾರತೀಯ ಸೇನೆ ಶಕ್ತವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಭಾರತೀಯ ಯೋಧರು ನಡೆಸಿದ ದಾಳಿಗೆ ಈಗಾಗಲೇ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ ಎಂದು ಸ್ಪಷ್ಟಪಡಿಸಿದರು.
 
ಕಳಸಾ ಬಂಡೂರಿ ಹಾಗೂ ಮಹದಾಯಿ ಜಲ ವಿವಾದ ಕುರಿತು ಮುಂಬೈನಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಬಾಯಿ ತೆಗೆದರೆ ಸುಳ್ಳು ಹೇಳುವ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಲಕ್ಷ್ಮಿ ಹೆಬ್ಬಾಳಕರ ವ್ಯಂಗ್ಯ

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಆದ್ರೂ ಬಿಟ್ಟಿ ಪ್ರಚಾರ: ಯಡಿಯೂರಪ್ಪ

ಭಾರತದ ವಿರುದ್ಧ ಕದನ ವಿರಾಮಕ್ಕೆ ಪಾಕಿಸ್ತಾನ ಸಹಾಯ ಕೇಳಿದ್ದು ಯಾರನ್ನು ಎಂಬ ಗುಟ್ಟು ಬಯಲು

ಬೆಂಗಳೂರಿಗೆ ಬಂದ ಅಮಿತ್ ಶಾ ಏನು ಹೇಳಿದ್ರು: ಗುಟ್ಟು ಬಿಟ್ಟು ಕೊಟ್ಟ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments