ಐದು ರಾಷ್ಟ್ರಗಳಿಗೆ ಸೀಮಿತ ದಾಳಿ ಬಗ್ಗೆ ವಿವರಣೆ ನೀಡಿದ ಭಾರತ

Webdunia
ಗುರುವಾರ, 29 ಸೆಪ್ಟಂಬರ್ 2016 (18:28 IST)
ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ 40 ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ 18 ಸೈನಿಕರ ಬಲಿದಾನಕ್ಕೆ ಪ್ರತೀಕಾರ ತೀರಿಸಿಕೊಂಡಿದೆ.  ದಾಳಿ ನಡೆದ ಕೆಲವೇ ಹೊತ್ತಿನಲ್ಲಿ ವಿಶ್ವದ ಬಲಿಷ್ಠ 5 ರಾಷ್ಟ್ರಗಳಿಗೆ ಈ ದಾಳಿಯ ಕುರಿತು ಭಾರತ ಮಾಹಿತಿ ನೀಡಿತು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಬಲ ರಾಷ್ಟ್ರಗಳಾದ ಅಮೇರಿಕಾ, ಫ್ರಾನ್ಸ್, ಬ್ರಿಟನ್, ರಷ್ಯಾ, ಚೀನಾಗಳಿಗೆ ಭಾರತ ತಾನು ಗಡಿಯಲ್ಲಿನ ಉಗ್ರನೆಲೆಗಳ ಮೇಲೆ ನಡೆಸಿದ ಸೀಮಿತ ದಾಳಿ ಕಾರ್ಯಾಚರಣೆಯ ವಿವರಣೆಯನ್ನು ನೀಡಿತು.
 
ಭಾರತದ ಕಮಾಂಡೋ ಕಾರ್ಯಾಚರಣೆಯನ್ನು ನೆರೆಯ ದೇಶ ಬಾಂಗ್ಲಾ ಬೆಂಬಲಿಸಿದ್ದು, ಭಾರತಕ್ಕೆ ಪ್ರತಿಕ್ರಿಯಿಸುವ ಹಕ್ಕಿದೆ ಎಂದಿದೆ.
 
ಕಳೆದ ರಾತ್ರಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಉಗ್ರರ ಕ್ಯಾಂಪ್‌ಗಳನ್ನು ಗುರಿಯಾಗಿರಿಸಿಕೊಂಡು ಸರ್ಜಿಕಲ್ ಸ್ಟ್ರೈಕ್ (ಸೀಮಿತ ದಾಳಿ) ಕೈಗೊಳ್ಳಲಾಗಿದ್ದು ದಾಳಿಯಲ್ಲಿ 40ಕ್ಕೂ ಹೆಚ್ಚು ಉಗ್ರರು ಮತ್ತು ಇಬ್ಬರು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಅವರ ಜತೆಗಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ಸೇನಾ ಮುಖ್ಯಸ್ಥ ರಣಬೀರ್ ಸಿಂಗ್ ಬಹಿರಂಗ ಪಡಿಸಿದ್ದು ಇದು ದೇಶಾದ್ಯಂತ ಹೊಸ ಸಂಚಲನವನ್ನು ಮೂಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments