Webdunia - Bharat's app for daily news and videos

Install App

ಯುಪಿಎ ಆಡಳಿತಾವಧಿಯಲ್ಲಿ ಮೂರು ಬಾರಿ ಸೀಮಿತ ದಾಳಿ

Webdunia
ಬುಧವಾರ, 5 ಅಕ್ಟೋಬರ್ 2016 (14:53 IST)
ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತಾವಧಿಯಲ್ಲಿ ಒಟ್ಟು ಮೂರು ಬಾರಿ ಸೀಮಿತ ದಾಳಿಯನ್ನು ಕೈಗೊಳ್ಳಲಾಗಿತ್ತು. ಆದರೆ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಇದನ್ನು ಎಂದು ಹೊರಹಾಕಿರಲಿಲ್ಲ ವಿರೋಧ ಪಕ್ಷ ಕಾಂಗ್ರೆಸ್ ಹೇಳಿದೆ. 

ಈ ಹಿಂದೆ ಕೂಡ ನಮ್ಮ ಸೇನೆ ಅನೇಕ ಬಾರಿ ಇಂತರ ಸೀಮಿತ ದಾಳಿಯನ್ನು ನಡೆಸಿ ಯಶಸ್ವಿಯಾಗಿತ್ತು ಎಂದು ಹೇಳಲು ಹೆಮ್ಮೆಯಾಗುತ್ತದೆ. ಯುಪಿಎ ಆಡಳಿತಾವಧಿಯಲ್ಲಿ ಸೆಪ್ಟೆಂಬರ್ 1,2011, ಜುಲೈ 28,2013 ಮತ್ತು ಜನೇವರಿ 14, 2014ರಲ್ಲಿ ನಾವು ವೈರಿಗಳಿಗೆ ತಕ್ಕ ಉತ್ತರವನ್ನು ನೀಡಿದ್ದೆವು ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. 
 
ಆದರೆ ಪ್ರೌಢಿಮೆ, ಬುದ್ದಿವಂತಿಕೆ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಭಾರತೀಯ ಸೇನೆಯ ಪರಿಣಾಮಾತ್ಮಕ ಪ್ರತಿಕ್ರಿಯೆ ಮತ್ತು ಕಾರ್ಯಾಚರಣೆ ಬಗ್ಗೆ ಪ್ರಚಾರ ಮಾಡಿರಲಿಲ್ಲ. ಎಲ್ಲ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆಯನ್ನುಸಾರ್ವಜನಿಕ ವೇದಿಕೆಯ ಮುಂದಿಡಲಾಗದು ಎಂದು ಅವರು ತಿಳಿಸಿದ್ದಾರೆ.
 
ಕೇವಲ ಕಾಂಗ್ರೆಸ್ ಸರ್ಕಾರವಲ್ಲ. ಈ ಹಿಂದಿನ ಸರ್ಕಾರಗಳು ಕೂಡ ಸೀಮಿತ ದಾಳಿಯನ್ನು ಕೈಗೊಂಡಿದ್ದವು. ರಾಜಕೀಯ ಭೇದಗಳಿದ್ದರೂ ರಾಷ್ಟ್ರೀಯ ಭದ್ರತೆಯ ವಿಷಯಕ್ಕೆ ಬಂದರೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರತ್ಯೇಕ ಅಭಿಪ್ರಾಯಗಳಿಲ್ಲ ಎಂದಿದ್ದಾರೆ ಸುರ್ಜೇವಾಲ.
 
ಪಾಕ್ ಸೀಮಿತ ದಾಳಿ ನಡೆದೇ ಇಲ್ಲ ಎನ್ನುತ್ತಿರುವ ಬಗ್ಗೆ ಪ್ರತಿಕ್ರಿಯೆ ಕೇಳಲಾಗಿ, ಸೀಮಿತ ದಾಳಿ ಮೇಲೆ ಪ್ರಶ್ನೆ ಎತ್ತಲು ಯಾವುದೇ ಕಾರಣಗಳಿಲ್ಲ. ಎಲ್ಲ ಸಾಕ್ಷ್ಯ, ದಾಖಲೆಗಳೊಂದಿಗೆ ಕೇಂದ್ರ ಸರ್ಕಾರ ಪಾಕಿಸ್ತಾನದ ಮೋಸ ಮತ್ತು ಸುಳ್ಳು ಪ್ರಚಾರವನ್ನು ಬಯಲು ಮಾಡಬೇಕೆಂದು ಎಂದು ಅವರು ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಮುಂದಿನ ಸುದ್ದಿ
Show comments