ತವರಿಗೆ ಮರಳಿದ ಸುರ್ಜಿತ್ ಸಿಂಗ್

Webdunia
ಭಾನುವಾರ, 30 ಅಕ್ಟೋಬರ್ 2016 (11:53 IST)
ಪಾಕ್ ಪ್ರತೀಕಾರಕ್ಕೆ ಬಲಿಪಶುವಾಗಿ ಬೇಹುಗಾರಿಕೆ ಆರೋಪ ಹೊತ್ತಿರುವ ಭಾರತೀಯ ಸೇನೆ ರಾಯಭಾರಿ ಸುರ್ಜಿತ್ ಸಿಂಗ್ ಶನಿವಾರ ಪಾಕಿಸ್ತಾನವನ್ನು ತೊರೆದು ತವರಿಗೆ ಮರಳಿದ್ದಾರೆ.

ದೇಶದ ಭದ್ರತೆಗೆ ಸಂಬಂಧಪಟ್ಟ ದಾಖಲೆ ಆರೋಪ ಹೊಂದಿದ ಆರೋಪದ ಮೇಲೆ ಪಾಕ್ ಹೈ ಕಮಿಷನ್‌ನ ಮೆಹಮೂದ್ ಅಕ್ತರ್‌ (35)  ಎಂಬುವವರನ್ನು ಗುರುವಾರ ಬಂಧಿಸಿ ಬಿಡುಗಡೆ ಮಾಡಲಾಗಿತ್ತು. ನೀವು ಇಲ್ಲಿ ಕೆಲಸ ಮಾಡುವುದು ಭಾರತಕ್ಕೆ ಸಮ್ಮತಿ ಇಲ್ಲ. 48 ಗಂಟೆಯೊಳಗೆ ದೇಶ ಬಿಡಿ ಎಂದು ಅವರಿಗೆ ಸೂಚನೆ ನೀಡಲಾಗಿತ್ತು.  
 
ತಮ್ಮ ಅಧಿಕಾರಿಯ ಮೇಲೆ ಆರೋಪ ಕೇಳಿ ಬರುತ್ತಿದ್ದಂತೆ ಪಾಕಿಸ್ತಾನ ಭಾರತದ ರಾಯಭಾರಿ ಅಧಿಕಾರಿ ಸುರ್ಜಿತ್ ಸಿಂಗ್ ಮೇಲೆ ಬೇಹುಗಾರಿಕೆ ಆರೋಪವನ್ನು ಹೊರಿಸಿತ್ತು. ಪಾಕ್ ರಕ್ಷಣಾ ಇಲಾಖೆಯ ಗೌಪ್ಯ ಮಾಹಿತಿಗಳನ್ನು ಭಾರತಕ್ಕೆ ರವಾನಿಸಿದ್ದಾರೆ ಎಂದು ದೂರಿದ್ದ ಪಾಕಿಸ್ತಾನ ಭಾರತ 1961ರ ವಿಯೆನ್ನಾ ಒಪ್ಪಂದವನ್ನು ಉಲ್ಲಂಘನೆ ಮಾಡಿದೆ, ಕೂಡಲೇ ಭಾರತೀಯ ರಾಯಭಾರಿಗಳು ಕೂಡಲೇ ದೇಶ ಬಿಡಬೇಕು ಎಂದಿತ್ತು.
 
ಉರಿ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ಗಡಿ ಭಾಗದಲ್ಲಿ ಗುಂಡಿನ ಚಕಮಕಿ ಹೆಚ್ಚಾಗುತ್ತಿದ್ದು, ಜತೆಗೆ ಇಂತಹ ಬೆಳವಣಿಗೆಗಳು ಕಂಡುಬರುತ್ತಿವೆ. ಉಭಯ ದೇಶಗಳ ಸಂಬಂಧ ದಿನೇ ದಿನೇ ಬಿಗಡಾಯಿಸುತ್ತಿದ್ದು ಸುಧಾರಿಸುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments