ಬಾಲರಾಮನ ಹಣೆಗೆ ಸೂರ್ಯ ತಿಲಕ: ದೃಶ್ಯೆ ನೋಡಿ ಪುಳಕಿತರಾದ ಭಕ್ತರು

Krishnaveni K
ಬುಧವಾರ, 17 ಏಪ್ರಿಲ್ 2024 (13:27 IST)
Photo Courtesy: Twitter
ಅಯೋಧ್ಯೆ: ಇಂದು ರಾಮನವಮಿ ನಿಮಿತ್ತ ಅಯೋಧ್ಯೆಯ ರಾಮಮಂದಿರದಲ್ಲಿ ಸೂರ್ಯ ರಶ್ಮಿ ಬಾಲರಾಮನ ಮೂರ್ತಿಯ ಹಣೆ ಸ್ಪರ್ಶಿಸಿದೆ. ಆಧುನಿಕ ತಂತ್ರಜ್ಞಾನ ಬಳಸಿ ಇಂತಹದ್ದೊಂದು ಚಮತ್ಕಾರ ಸೃಷ್ಟಿಸಲಾಗಿದೆ.

ಅಯೋಧ್ಯೆಯ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ವಿಜೃಂಭಣೆಯಿಂದ ರಾಮನವಮಿ ಆಚರಣೆ ನಡೆಯುತ್ತಿದೆ.  ಇತ್ತೀಚೆಗಷ್ಟೇ ರಾಮಮಂದಿರ ಲೋಕಾರ್ಪಣೆಯಾಗಿತ್ತು. ಇದೇ ಮೊದಲ ಬಾರಿಗೆ ರಾಮನ ಜನ್ಮಭೂಮಿಯಲ್ಲೇ ರಾಮ ನವಮಿ ಆಚರಣೆಯಾಗುತ್ತಿರುವುದು  ವಿಶೇಷ.

ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ತಜ್ಞರು ಈ ತಂತ್ರಜ್ಞಾನವನ್ನು ರೂಪಿಸಿದ್ದಾರೆ. ಮೂರು ಕನ್ನಡಿಗಳ ಸಹಾಯದಿಂದ ಬಾಲರಾಮನ ಹಣೆಯ ಮೇಲೆ ಸೂರ್ಯರಶ್ಮಿ ಬೀಳುವಂತೆ ಮಾಡಲಾಗಿದೆ. ಇದನ್ನು ಸಾಮಾನ್ಯ ಜನರೂ ಟಿವಿ ಮೂಲಕ ಕಣ್ತುಂಬಿಕೊಂಡಿದ್ದಾರೆ. ಇನ್ನು ಮುಂದೆ ಪ್ರತೀ ವರ್ಷವೂ ಈ ವಿದ್ಯಮಾನ ನಡೆಯಲಿದೆ. ದೂರದರ್ಶನದಲ್ಲಿ ಇದರ ಲೈವ್ ದೃಶ‍್ಯಾವಳಿ ಪ್ರಸಾರ ಮಾಡಲಾಗಿತ್ತು.

ಸೂರ್ಯ ರಶ್ಮಿಗಳು ನೇರವಾಗಿ ರಾಮನ ಹಣೆಯ ಮೇಲೆ ಬೀಳುತ್ತಿದ್ದಂತೇ ಅರ್ಚಕರು ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ. ರಾಮನವಮಿ ಆಚರಣೆ ನೋಡಲು ರಾಮಮಂದಿರದ ಸುತ್ತ ಎಲ್ ಇಡಿ ಸ್ಕ್ರೀನ್ ಅಳವಡಿಲಾಗಿದೆ.  ಅಯೋಧ‍್ಯೆಯಲ್ಲಿ ಮಾಡಲಾಗಿರುವ ಈ ಪ್ರಯೋಗವನ್ನು ಈಗಾಗಲೇ ಕೆಲವು ಜೈನ ಮಂದಿರಗಳಲ್ಲಿ ಒರಿಸ್ಸಾದ ಕೊನಾರ್ಕ್ ಸೂರ್ಯ ದೇವಾಲಯದಲ್ಲೂ ಪ್ರಯೋಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಮುಂದಿನ ಸುದ್ದಿ
Show comments