Webdunia - Bharat's app for daily news and videos

Install App

ತಮ್ಮ ಬಗ್ಗೆ ಬಂದ ರೂಮರ್ ಗಳಿಗೆ ಸ್ಪಷ್ಟನೆ ಕೊಟ್ಟ ಮಾಜಿ ಸಚಿವೆ ಸುಷ್ಮಾ ಸ್ವರಾಜ್

Webdunia
ಮಂಗಳವಾರ, 11 ಜೂನ್ 2019 (10:14 IST)
ನವದೆಹಲಿ: ಕಳೆದ ಬಾರಿ ಮೋದಿ ಸಂಪುಟದಲ್ಲಿ ಕೇಂದ್ರ ವಿದೇಶಾಂಗ ಸಚಿವೆಯಾಗಿ ಜನಪ್ರಿಯ ಕೆಲಸ ಮಾಡಿದ್ದ ಸುಷ್ಮಾ ಸ್ವರಾಜ್ ಆಂಧ್ರಪ್ರದೇಶದ ರಾಜ್ಯಪಾಲೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.


ಅದಕ್ಕೆ ಈಗ ಸ್ವತಃ ಸುಷ್ಮಾ ಸ್ವರಾಜ್ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆಲ್ಲಾ ಮೊದಲು ಕಾರಣವಾಗಿದ್ದು ಕೇಂದ್ರ ಸಚಿವ ಹರ್ಷವರ್ಧನ್ ತಮ್ಮ ಟ್ವಿಟರ್ ಖಾತೆಯಲ್ಲಿ ಸುಷ್ಮಾ ಸ್ವರಾಜ್ ರನ್ನು ಆಂಧ್ರಪ್ರದೇಶದ ನೂತನ ರಾಜ್ಯಪಾಲೆಯಾಗಿ ನೇಮಿಸಲಾಗಿದೆ. ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದು.

ಬಳಿಕ ಇದಕ್ಕೆ ನೀರೆರೆಯುವಂತೆ ಸುಷ್ಮಾ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿದ್ದಕ್ಕೆ ಟ್ವಿಟರಿಗರು ಆಕೆ ರಾಜ್ಯಪಾಲೆ ಎಂದು ಘೋಷಿಸಿಯೇ ಬಿಟ್ಟರು! ಆದರೆ ಇಷ್ಟೆಲ್ಲಾ ರೂಮರ್ ಗಳು ಹಬ್ಬುತ್ತಿದ್ದಂತೆ ಟ್ವೀಟ್ ಮಾಡಿದ ಸುಷ್ಮಾ ನಾನು ಆಂಧ್ರ ರಾಜ್ಯಪಾಲೆಯಾಗುತ್ತಿದ್ದೇನೆಂಬ ಸುದ್ದಿ ಸುಳ್ಳು. ನಾನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿದ್ದಕ್ಕೆ ಟ್ವಿಟರಿಗರು ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments