ತನ್ನ ರಕ್ಷಣೆಗೆ ಭಾರತ ಶಸ್ತ್ರ ಸಜ್ಜಿತವಾಗಿದೆ: ಚೀನಾಗೆ ಸುಷ್ಮಾ ಎಚ್ಚರಿಕೆ

Webdunia
ಗುರುವಾರ, 20 ಜುಲೈ 2017 (16:10 IST)
ನವದೆಹಲಿ:ಡೊಕ್ಲಾಮ್ ಗಡಿಯಲ್ಲಿನ ಬೆದರಿಕೆಗಳಿಗೆ ಭಾರತ ಹಿಂಜರಿಯುವುದಿಲ್ಲ. ಇದು ಭಾರತದ ಭದ್ರತೆಗೆ ಸವಾಲಾಗಿದ್ದು, ತನ್ನನ್ನು ರಕ್ಷಿಸಿಕೊಳ್ಳಲು ಭಾರತ ಶಸ್ತ್ರ ಸಜ್ಜಿತವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
 
ಡೊಕ್ಲಾಮ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಉತ್ತರಿಸಿದ ಸುಷ್ಮಾ ಸ್ವರಾಜ್, ಟಿಬೆಟ್, ಸಿಕ್ಕಿಂ, ಚೀನಾ ಗಡಿ ರೇಖೆಗಳಲ್ಲಿ ರಸ್ತೆ ನಿರ್ಮಾಣ, ರಿಪೇರಿ ಎಂಬ ಕಾರಣಗಳನ್ನು ನೀಡಿ ಚೀನಾ ಗಡಿ ದಾಟಿ ಮುಂದೆ ಬರುತ್ತಿದೆ. ಗಡಿಯಲ್ಲಿ ನಿಯೋಜಿಸಿರುವ ಸೈನಿಕರನ್ನು ಭಾರತ ಹಿಂಪಡೆಯಬೇಕು ಎಂದು ಚೀನಾ ಬಯಸಿದರೆ, ಅದೇ ಸ್ಥಳದಲ್ಲಿ ಚೀನಾ ನಿಯೋಜಿಸಿರುವ ಸೈನಿಕರನ್ನೂ ಹಿಂಪಡೆಯಲಿ ಎಂಬುದು ಭಾರತದ ಆಗ್ರಹ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.
 
ಉಭಯ ರಾಷ್ಟ್ರಗಳ ಸೇನೆ ಹಿಂದಕ್ಕೆ ಸರಿದ ಬಳಿಕವಷ್ಟೇ ಗಡಿ ಬಿಕ್ಕಟ್ಟು ಕುರಿತ ಯಾವುದೇ ವಿಚಾರ ಕುರಿತಂತೆ ಮಾತುಕತೆ ನಡೆಸಲು ಭಾರತ ಸಿದ್ಧವಾಗಿರುತ್ತದೆ. ಯಾವುದೇ ಪರಿಸ್ಥಿತಿಯಲ್ಲಿಯೂ ತನ್ನನ್ನು ಸಮರ್ಥಿಸಿಕೊಳ್ಳಲು ಭಾರತ ಸಿದ್ಧವಿದೆ. ವಿವಾದ ಸಂಬಂಧ ಕಾನೂನು ಮತ್ತು ಹಕ್ಕುಗಳು ನಮ್ಮ ಕಡಿಗಿದೆ. ಇತರೆ ದೇಶದ ಜನತೆ ಹಾಗೂ ಇತರೆ ರಾಷ್ಟ್ರಗಳು ಭಾರತದ ನಿಲುವನ್ನು ಬೆಂಬಲಿಸಿವೆ. ಚೀನಾದ ನಡೆಯನ್ನು ನಾವು ಒಗ್ಗಟ್ಟಿನಿಂದ ಖಂಡಿಸುವುದಾಗಿ ತಿಳಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments