Webdunia - Bharat's app for daily news and videos

Install App

ತನ್ನ ರಕ್ಷಣೆಗೆ ಭಾರತ ಶಸ್ತ್ರ ಸಜ್ಜಿತವಾಗಿದೆ: ಚೀನಾಗೆ ಸುಷ್ಮಾ ಎಚ್ಚರಿಕೆ

Webdunia
ಗುರುವಾರ, 20 ಜುಲೈ 2017 (16:10 IST)
ನವದೆಹಲಿ:ಡೊಕ್ಲಾಮ್ ಗಡಿಯಲ್ಲಿನ ಬೆದರಿಕೆಗಳಿಗೆ ಭಾರತ ಹಿಂಜರಿಯುವುದಿಲ್ಲ. ಇದು ಭಾರತದ ಭದ್ರತೆಗೆ ಸವಾಲಾಗಿದ್ದು, ತನ್ನನ್ನು ರಕ್ಷಿಸಿಕೊಳ್ಳಲು ಭಾರತ ಶಸ್ತ್ರ ಸಜ್ಜಿತವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
 
ಡೊಕ್ಲಾಮ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಉತ್ತರಿಸಿದ ಸುಷ್ಮಾ ಸ್ವರಾಜ್, ಟಿಬೆಟ್, ಸಿಕ್ಕಿಂ, ಚೀನಾ ಗಡಿ ರೇಖೆಗಳಲ್ಲಿ ರಸ್ತೆ ನಿರ್ಮಾಣ, ರಿಪೇರಿ ಎಂಬ ಕಾರಣಗಳನ್ನು ನೀಡಿ ಚೀನಾ ಗಡಿ ದಾಟಿ ಮುಂದೆ ಬರುತ್ತಿದೆ. ಗಡಿಯಲ್ಲಿ ನಿಯೋಜಿಸಿರುವ ಸೈನಿಕರನ್ನು ಭಾರತ ಹಿಂಪಡೆಯಬೇಕು ಎಂದು ಚೀನಾ ಬಯಸಿದರೆ, ಅದೇ ಸ್ಥಳದಲ್ಲಿ ಚೀನಾ ನಿಯೋಜಿಸಿರುವ ಸೈನಿಕರನ್ನೂ ಹಿಂಪಡೆಯಲಿ ಎಂಬುದು ಭಾರತದ ಆಗ್ರಹ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.
 
ಉಭಯ ರಾಷ್ಟ್ರಗಳ ಸೇನೆ ಹಿಂದಕ್ಕೆ ಸರಿದ ಬಳಿಕವಷ್ಟೇ ಗಡಿ ಬಿಕ್ಕಟ್ಟು ಕುರಿತ ಯಾವುದೇ ವಿಚಾರ ಕುರಿತಂತೆ ಮಾತುಕತೆ ನಡೆಸಲು ಭಾರತ ಸಿದ್ಧವಾಗಿರುತ್ತದೆ. ಯಾವುದೇ ಪರಿಸ್ಥಿತಿಯಲ್ಲಿಯೂ ತನ್ನನ್ನು ಸಮರ್ಥಿಸಿಕೊಳ್ಳಲು ಭಾರತ ಸಿದ್ಧವಿದೆ. ವಿವಾದ ಸಂಬಂಧ ಕಾನೂನು ಮತ್ತು ಹಕ್ಕುಗಳು ನಮ್ಮ ಕಡಿಗಿದೆ. ಇತರೆ ದೇಶದ ಜನತೆ ಹಾಗೂ ಇತರೆ ರಾಷ್ಟ್ರಗಳು ಭಾರತದ ನಿಲುವನ್ನು ಬೆಂಬಲಿಸಿವೆ. ಚೀನಾದ ನಡೆಯನ್ನು ನಾವು ಒಗ್ಗಟ್ಟಿನಿಂದ ಖಂಡಿಸುವುದಾಗಿ ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments