Webdunia - Bharat's app for daily news and videos

Install App

ಸುಷ್ಮಾ ಸ್ವರಾಜ್ ಹೃದಯ ವೈಶಾಲ್ಯತೆಯನ್ನು ಪಾಕ್ ಎಂದಿಗೂ ಕಲಿಯಲಾರದು

Webdunia
ಬುಧವಾರ, 5 ಅಕ್ಟೋಬರ್ 2016 (14:46 IST)
ಉರಿ ದಾಳಿ, ಬಳಿಕ ಕೈಗೊಂಡ ಸೀಮಿತ ದಾಳಿಯ ಬಳಿಕ ಪಾಕ್ ಮತ್ತು ಭಾರತದ ನಡುವಿನ ಸಂಬಂಧ ಬೂದಿ ಮುಚ್ಚಿದ ಕೆಂಡದಂತಿದೆ. ಇಂತಹ ವಿಷಯ ಸ್ಥಿತಿಯಲ್ಲೂ, ರಾಜತಾಂತ್ರಿಕವಾಗಿ ಎಷ್ಟೇ ಹಗೆತನವಿದ್ದರೂ ಮಾನವೀಯತೆಗೆ ಗಡಿಗಳಿಲ್ಲ ಎಂಬುದನ್ನು ತೋರಿಸಿರುವ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ನಾಯಕತ್ವ, ಹೃದಯ ವೈಶಾಲ್ಯತೆ ಎಂದರೇನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 
ಜಾಗತಿಕ ಯುವ ಶಾಂತಿ ಉತ್ಸವದಲ್ಲಿ ಪಾಲ್ಗೊಳ್ಳಲು ಕಳೆದ 7 ದಿನಗಳಿಂದ ಭಾರತದಲ್ಲಿದ್ದ 19 ಪಾಕ್ ಯುವತಿಯರು ಮಂಗಳವಾರ ತವರಿಗೆ ಮರಳಿದರು. 
 
ಸೆಪ್ಟೆಂಬರ್ 27 ರಂದು ಅವರು ಭಾರತಕ್ಕೆ ಆಗಮಿಸಿದ್ದು, ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಗಳ ಮೇಲೆ ಭಾರತ ಸೀಮಿತ ದಾಳಿ ನಡೆಸಿದ ಬಳಿಕ ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಆತಂಕಕ್ಕೀಡಾಗಿದ್ದರು. 19 ಯುವತಿಯರು ದೇಶಕ್ಕೆ ಮರಳುವಂತೆ ಪಾಕ್ ಕೂಡ ಒತ್ತಡ ಹೇರಿತ್ತು. ಹೀಗಾಗಿ ನಿಗದಿತ ಸಮಯಕ್ಕಿಂತ ಮೊದಲೇ ಅವರು ದೇಶಕ್ಕೆ ಹಿಂತಿರುವ ಅನಿವಾರ್ಯತೆ ಬಂದೊದಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಂಚಾಲಕಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತನಾಡಿದ್ದರು. ಅವರ ಮನವಿಗೆ ಸ್ಪಂದಿಸಿದ್ದ ಸುಷ್ಮಾ ಸ್ವರಾಜ್ ಅವರ ಸುರಕ್ಷಿತ ಮರಳುವಿಕೆಗೆ ವ್ಯವಸ್ಥೆ ಮಾಡುವುದಾಗಿ ವಾಗ್ದಾನ ಮಾಡಿದ್ದರು.
 
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೇರಿದಂತೆ ಭಾರತೀಯ ಉನ್ನತ ಅಧಿಕಾರಿಗಳು  ಮಕ್ಕಳ ಸುರಕ್ಷತೆ ಬಗ್ಗೆ ಚಿಂತೆ ಬೇಡ ಎಂದು ಭರವಸೆ ನೀಡಿದ ಮೇಲೆ ಪ್ರವಾಸ ನಿಗದಿಯಂತೆ ಮುಂದುವರೆಯಿತು ಎಂದು ಆಯೋಜಕ ಪ್ರಮೋದ್ ಶರ್ಮಾ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

India, Pakistan: ಈ ಸಂದರ್ಭದಲ್ಲಿ ಭಾರತೀಯರು ದಯವಿಟ್ಟು ಈ ತಪ್ಪು ಕೆಲಸಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments