Webdunia - Bharat's app for daily news and videos

Install App

ಅನೈತಿಕ ಸಂಬಂಧ ಶಂಕೆ: ಸುತ್ತಿಗೆಯಿಂದ ಹೊಡೆದು ಕೊಲೆ

Webdunia
ಭಾನುವಾರ, 2 ಅಕ್ಟೋಬರ್ 2016 (14:36 IST)
ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದ ಮೇಲೆ ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ದಾರುಣ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಸಮೀಪದ ಜಯಂತಿ ಗ್ರಾಮದಲ್ಲಿ ನಡೆದಿದೆ. 
ಆರೋಪಿ ತಿಮ್ಮನಿಗೆ ರೇಣುಕ ಮೂರನೆಯ ಪತ್ನಿಯಾಗಿದ್ದು ಇಬ್ಬರಲ್ಲಿ ವಯಸ್ಸಿನ ಅಂತರ ಅಗಾಧವಾಗಿತ್ತು. ಅವರಿಬ್ಬರಲ್ಲಿ ಹೊಂದಾಣಿಕೆ ಇರಲಿಲ್ಲ. ಹೀಗಾಗಿ ಸದಾ ಜಗಳವಾಡಿಕೊಂಡಿರುತ್ತಿದ್ದರು. ಅಲ್ಲದೇ ಪತ್ನಿಗೆ ಬೇರೆಯವರ ಜತೆ ಅಕ್ರಮ ಸಂಬಂಧ ಇದೆ ಎಂದು ಕಳೆದ ಕೆಲ ದಿನಗಳಿಂದ ತಿಮ್ಮ ಅನುಮಾನ ಪಡುತ್ತಿದ್ದ. 
 
ನಿನ್ನೆ ರಾತ್ರಿ ಸಹ ಇಬ್ಬರ ನಡುವೆ ಜಗಳವಾಗಿದ್ದು ಕೋಪದ ಭರದಲ್ಲಿ ತಿಮ್ಮ ಪತ್ನಿಗೆ ಸುತ್ತಿಗೆಯಿಂದ ಹೊಡೆದಿದ್ದಾನೆ. ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದರಿಂದ ರೇಣುಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರಾತ್ರಿ ಇಡೀ ಶವದ ಜತೆ ಕಳೆದ ತಿಮ್ಮ ಮರುದಿನ ಠಾಣೆಗೆ ಹೋಗಿ ಶರಣಾಗಿದ್ದಾನೆ .
 
ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು  ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments