Webdunia - Bharat's app for daily news and videos

Install App

ತಮಿಳುನಾಡು ವಿಧಾನಸಭೆ ಮುಂದೆ ಅಮಾನತಾಗಿರುವ ಡಿಎಂಕೆ ಶಾಸಕರ ಧರಣಿ

Webdunia
ಗುರುವಾರ, 18 ಆಗಸ್ಟ್ 2016 (17:07 IST)
ತಮಿಳುನಾಡು ವಿಧಾನಸಭೆಯಿಂದ ಒಂದು ವಾರದ ಮಟ್ಟಿಗೆ ಅಮಾನತಾಗಿರುವ ಡಿಎಂಕೆ ಪಕ್ಷದ 80 ಸದಸ್ಯರು ತಮ್ಮ ನಾಯಕ ಎಮ್.ಕೆ.ಸ್ಟಾಲಿನ್ ಜತೆಗೂಡಿ ಗುರುವಾರ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.

ಕಲಾಪದ ಸಂದರ್ಭದಲ್ಲಿ ಕೋಲಾಹಲವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಸ್ಪೀಕರ್ ಪಿ. ಧನಪಾಲ್ ಬುಧವಾರ 80 ಡಿಎಂಕೆ ಶಾಸಕರನ್ನು ಅಮಾನತುಗೊಳಿಸಿದ್ದರು. ಆದರೆ ಇಂದು ಅವರೆಲ್ಲ ವಿಧಾನಸಭೆಯನ್ನು ಪ್ರವೇಶಿಸಲು ಪ್ರಯತ್ನಿಸಿದಾಗ ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಇದರಿಂದ ಕೆರಳಿದ ಅವರೆಲ್ಲರೂ ವಿಧಾನಸಭೆ ಮುಂದೆ ಧರಣಿಗೆ ಕುಳಿತಿದ್ದಾರೆ. 
 
ಈ ಹಿನ್ನೆಲೆಯಲ್ಲಿ ವಿಧಾನ ಸಭೆ ಸುತ್ತಮುತ್ತ ಅಪಾರ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ವಿಧಾನಸಭೆಯ ಗೇಟ್ ನಂ4ನ್ನು ಕಾವಲುಗಾರರು ಲಾಕ್ ಮಾಡಿದ್ದಾರೆ. ಸ್ಟಾಲಿನ್ , ಹಿರಿಯ ನಾಯಕ ಎಸ್. ದುರೈ ಮುರುಗನ್ ಮತ್ತು ಇತರರು ವಿಧಾನಸಭೆಯಲ್ಲಿರುವ ಡಿಎಂಕೆ ಚೇಂಬರ್‌ನ್ನು ಪ್ರವೇಶಿಸಲು ಭದ್ರತಾ ಸಿಬ್ಬಂದಿ ಬಳಿ ಕೇಳಿಕೊಂಡಿದ್ದಾರೆ. ಆದರೆ ಅವರನ್ನು ಒಳಗೆ ಬಿಡಲು ಭದ್ರತಾ ಸಿಬ್ಬಂದಿ ನಿರಾಕರಿಸಿದರು. ಎರಡು ಕಡೆಯವರಲ್ಲಿ ಮಾತಿನ ಚಕಮಕಿ ನಡೆಯಿತು. ನಿಮ್ಮನ್ನು ಒಳಬಿಡಬಾರದೆಂದು ನಮಗೆ ಸೂಚನೆ ನೀಡಲಾಗಿದೆ ಎಂದು ಸಿಬ್ಬಂದಿ ಹೇಳಲಾಗಿ ಲಿಖಿತ ಆದೇಶ ತೋರಿಸುವಂತೆ ಡಿಎಂಕೆ ಶಾಸಕರು ಗಲಾಟೆ ಮಾಡಿದರು.
 
ನಾವು ಕೇವಲ ಅಮಾನತಾಗಿದ್ದೇವೆ. ಆದರೆ ನಾವು ಶಾಸಕರು. ನಮ್ಮನ್ನು ಏಕೆ ಒಳಗೆ ಬಿಡುತ್ತಿಲ್ಲ ಎಂದು ಅರ್ಥವಾಗುತ್ತಿಲ್ಲ ಎಂದು ಡಿಎಂಕೆ ಶಾಸಕ ಮತ್ತು ಮಾಜಿ ಶಾಲಾ ಶಿಕ್ಷಣ ಸಟಿವ ಥಂಗಮ್ ಥೆನ್ನರಸು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

ಮುಂದಿನ ಸುದ್ದಿ
Show comments