Webdunia - Bharat's app for daily news and videos

Install App

ಸ್ವಚ್ಛ ಭಾರತ: ಕಾಂಗ್ರೆಸ್‌ ಹೈಕಮಾಂಡ್‌ಗೆ ಸೆಡ್ಡು ಹೊಡೆದು ಪೊರಕೆ ಹಿಡಿಯಲಿರುವ ಶಶಿ ಥರೂರ್

Webdunia
ಶನಿವಾರ, 25 ಅಕ್ಟೋಬರ್ 2014 (12:53 IST)
ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ ಕಾರಣಕ್ಕೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅವರನ್ನು ಕಾಂಗ್ರೆಸ್ ವಕ್ತಾರನ ಸ್ಥಾನದಿಂದ ಪದಚ್ಯುತಗೊಳಿಸಿರಬಹುದು, ಆದರೆ ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಳ್ಳುವ ಅವರ ದೃಢ ನಿರ್ಧಾರಕ್ಕೆ ಹೈಕಮಾಂಡ್‌ನ ಈ ಕ್ರಮ ಅಡ್ಡಿಯಾಗಿಲ್ಲ .

ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿಯವರಿಂದ ಆಹ್ವಾನ ಪಡೆದಿರುವ ಕಾಂಗ್ರೆಸ್ ನಾಯಕ ಶಶಿ ಥರೂರ್ ಶನಿವಾರ ತಿರುವನಂತಪುರಮ್ ಸಮುದ್ರತೀರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 
 
'ಅತಿಯಾದ ಕಸದಿಂದ ಕೂಡಿದ ಮತ್ತು ಗಲೀಜು ಎಂಬ ಕುಖ್ಯಾತಿ ಪಡೆದ ವಿಳಿಂಜಂ ಬೀಚ್‌ನ್ನು , ಅಕ್ಟೋಬರ್ 25, ಬೆಳಿಗ್ಗೆ 11 ಗಂಟೆಯಿಂದ ಸ್ಥಳೀಯ ನಿವಾಸಿಗಳ ಜತೆ ಸೇರಿ ಸ್ವಚ್ಛಗೊಳಿಸಲಿದ್ದೇನೆ' ಎಂದು ತರೂರ್ ಟ್ವೀಟ್ ಮಾಡಿದ್ದಾರೆ.
 
ಕ್ಲೀನ್ ಇಂಡಿಯಾ ಮಿಷನ್ ಭಾಗವಾಗಿ ಜಾಗೃತಿಯನ್ನು ಕೈಗೊಳ್ಳಲು ಸಚಿನ್ ತೆಂಡೂಲ್ಕರ್, ಶಶಿ ತರೂರ್, ಅನಿಲ್ ಅಂಬಾನಿ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಒಂಬತ್ತು ಪ್ರಖ್ಯಾತ ವ್ಯಕ್ತಿಗಳನ್ನು ಪ್ರಧಾನಿ ಮೋದಿ ನಾಮನಿರ್ದೇಶನ ಮಾಡಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments