Webdunia - Bharat's app for daily news and videos

Install App

ಹಿಂದೂಗಳನ್ನು ಒಗ್ಗೂಡಿಸಿ ಮುಸ್ಲಿಂರನ್ನು ವಿಭಜಿಸಿ ಚುನಾವಣೆ ಗೆಲ್ಲುವುದು ಬಿಜೆಪಿ ತಂತ್ರ: ಸುಬ್ರಹ್ಮಣ್ಯಂ ಸ್ವಾಮಿ

Webdunia
ಗುರುವಾರ, 20 ಅಕ್ಟೋಬರ್ 2016 (14:28 IST)
ಹಿಂದೆ ನಮ್ಮ ವಿರುದ್ಧ ಹಿಂದೂಗಳನ್ನು ಒಡೆದು ಮುಸ್ಲಿಂ ಸಮುದಾಯವನ್ನು ಒಗ್ಗೂಡಿಸುವ ಸಂಚು ನಡೆದಿತ್ತು. ಇದೀಗ ನಾವು ಮುಸ್ಲಿಮರನ್ನು ಒಡೆದು ಹಿಂದೂಗಳನ್ನು ಒಗ್ಗೂಡಿಸುತ್ತೇವೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.
 
ಉತ್ತರಪ್ರದೇಶದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸ್ವಾಮಿ ಹೇಳಿಕೆ ವಿಪಕ್ಷಗಳಿಗೆ ಬ್ರಹ್ಮಾಸ್ತ್ರವನ್ನೇ ಕೊಟ್ಟಂತಾಗಿದೆ.
 
ರಾಮಮಂದಿರ ವಿವಾದವನ್ನು ಇತ್ಯರ್ಥಗೊಳಿಸಿ ಹಿಂದೂಗಳನ್ನು ಒಗ್ಗೂಡಿಸಿ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವುದು ಶತಸಿದ್ಧ ಎಂದು ಗುಡುಗಿದ್ದಾರೆ.
 
ದೇಶದಲ್ಲಿ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆ ಗೆಲ್ಲಬಹುದು. ಆದರೆ, ಅದು ಸಾಕಾಗುವುದಿಲ್ಲ.  ಹಿಂದೆ ನಮ್ಮ ವಿರುದ್ಧ ಹಿಂದೂಗಳನ್ನು ಒಡೆದು ಮುಸ್ಲಿಂ ಸಮುದಾಯವನ್ನು ಒಗ್ಗೂಡಿಸುವ ಸಂಚು ನಡೆದಿತ್ತು. ಇದೀಗ ನಾವು ಮುಸ್ಲಿಮರನ್ನು ಒಡೆದು ಹಿಂದೂಗಳನ್ನು ಒಗ್ಗೂಡಿಸಿ ಚುನಾವಣೆ ಗೆಲ್ಲುತ್ತೇವೆ ಎಂದರು.
 
ಅಭಿವೃದ್ಧಿಯ ಹರಿಕಾರರಾಗಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಪಿ.ವಿ.ನರಸಿಂಹರಾವ್, ಕಾಂಗ್ರೆಸ್ ಮುಖಂಡ ಮೂರಾರ್ಜಿ ದೇಸಾಯಿ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಉದಾಹರಿಸಿದರು.
 
ಯಾವುದೇ ಚುನಾವಣೆಯಲ್ಲಿ ಗೆಲ್ಲಲು ಭ್ರಷ್ಟಾಚಾರ, ಅಭಿವೃದ್ಧಿ ಮತ್ತು ರಾಮಮಂದಿರ ವಿಷಯಗಳಿಗೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ತಿಳಿಸಿದ್ದಾರೆ. 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚರಿಸುವವರ ಗಮನಕ್ಕೆ: ಶನಿವಾರದವರೆಗೂ ರಾತ್ರಿ ಬಂದ್

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಮುಂದಿನ ಸುದ್ದಿ
Show comments