Webdunia - Bharat's app for daily news and videos

Install App

ತಾಳಗುಪ್ಪ-ಹೊನ್ನಾವರ ರೈಲು ಮಾರ್ಗ ಸರ್ವೇ ಪೂರ್ಣ, ಮುಂದಿನ ಬಜೆಟ್‌ನಲ್ಲಿ ಅನುಮೋದನೆ?

Webdunia
ಗುರುವಾರ, 27 ಅಕ್ಟೋಬರ್ 2016 (10:17 IST)
ಬೆಂಗಳೂರು: ಎಲ್ಲ ಅಂದುಕೊಂಡಂತೆ ಸಾಗಿದರೆ ಮುಂಬರುವ ಕೇಂದ್ರ ರೇಲ್ವೆ ಬಜೆಟ್ ನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹೊನ್ನಾವರ-ತಾಳಗುಪ್ಪ, ಧಾರವಾಡ- ಬೈಲಹೊಂಗಲ ನೂತನ ರೈಲ್ವೆ ಮಾರ್ಗಕ್ಕೆ ಹಸಿರು ನಿಶಾನೆ ದೊರಕಲಿವೆ.

ಪ್ರಸಕ್ತ ಸಾಲಿನಲ್ಲಿ ಘೋಷಿಸಿರುವ ನೂತನ ರೈಲ್ವೆ ಮಾರ್ಗಗಳ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ರೇಲ್ವೆ ಮಂಡಳಿಗೆ ಸರ್ವೇ ವರದಿ ತಲುಪಲಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸುಮಾರು ಹನ್ನೆರಡು ಯೋಜನೆಗಳು ಮೂರ್ತ ರೂಪ ಪಡೆದುಕೊಳ್ಳಲಿದೆ. ಆ ಮೂಲಕ ರೈಲ್ವೆ ಪ್ರಯಾಣಿಕರ ಕನಸು ಸಾಕಾರ ಪಡೆದುಕೊಳ್ಳಲಿದೆ.
 
ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭು ಈ ಬಾರಿಯ ಬಜೆಟ್‌ನಲ್ಲಿ ಹೊಸ ಯೋಜನೆಗಳಿಗಿಂತ ಹಳೆಯ ಯೋಜನೆ ಪೂರ್ಣಗೊಳಿಸುವುದಕ್ಕೆ ಒತ್ತು ನೀಡಿದ್ದರು. ಅಲ್ಲದೇ ಅನೇಕ ಹಳೆಯ ಯೋಜನೆಗಳ ಸರ್ವೇ ಕಾರ್ಯವೇ ಮಾಡದಿರುವುದು ಗಮನಿಸಿ, ಅಂಥ ಯೋಜನೆಗಳ ಸರ್ವೇಗೆ ಅಗತ್ಯ ಹಣ ಮಂಜೂರು ಮಾಡುವ ಜತೆಗೆ ಅದು ಕಾರ್ಯಾರಂಭಗೊಳ್ಳಲು ಕ್ರಮ ಕೈಗೊಂಡಿದ್ದರು. ಅವುಗಳಲ್ಲಿ ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯ 12 ಯೋಜನೆಗಳು ಸೇರಿಕೊಂಡಿದ್ದವು. ಈಗ ಅವುಗಳ ಸರ್ವೇ ಕಾರ್ಯಗಳೆಲ್ಲ ಮುಗಿದಿದ್ದು, ಬಜೆಟ್‌ನಲ್ಲಿ ಅನುಮೋದನೆಯೊಂದೇ ದೊರಕಬೇಕಿದೆ.
 
ಅವುಗಳಲ್ಲಿ ಮುಖ್ಯವಾಗಿ ಧಾರವಾಡ- ಬೈಲಹೊಂಗಲ್- ಬೆಳಗಾವಿ ಮಾರ್ಗ ನಿರ್ಮಾಣಗೊಳ್ಳಬೇಕು ಎನ್ನುವುದು ಹಳೆಯ ಬೇಡಿಕೆಯಲ್ಲಿ ಒಂದಾಗಿತ್ತು. 91 ಕಿ.ಮೀ. ಉದ್ದದ ಈ ಮಾರ್ಗ ವಿಶೇಷವಾಗಿ ರೈತರಿಗೆ ಅನುಕೂಲವಾಗಲಿದ್ದು, ವಾಣಿಜ್ಯ ವಹಿವಾಟಿಗೆ ಉತ್ತಮವಾಗಿದೆ. ಬಹುನಿರೀಕ್ಷಿತ 82 ಕಿ.ಮೀ. ಉದ್ದದ ತಾಳಗುಪ್ಪಾ-ಹೊನ್ನಾವರ ಮಾರ್ಗ ನಿರ್ಮಾಣದ ಸರ್ವೇ, 53 ಕಿ.ಮೀ. ಉದ್ದದ ಗದಗ-ಹಾವೇರಿ ಹೊಸ ಮಾರ್ಗ ನಿರ್ಮಾಣದ ಸರ್ವೇ ಕಾರ್ಯವೂ ಮುಗಿದಿದೆ. ಇಂಜಿನಿಯರಿಂಗ್ ಹಾಗೂ ಸಂಚಾರಿ ವಿಭಾಗದವರು ಈ ಮಾರ್ಗ ನಿರ್ಮಾಣದಲ್ಲಿ ಯಾವುದೇ ತೊಂದರೆಯಾಗದು ಎನ್ನುವ ಮಹತ್ವದ ಸಂಗತಿಯನ್ನು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments