Webdunia - Bharat's app for daily news and videos

Install App

ಭಾರತ ನಿರ್ಮಿಸಿದ ಸಲ್ಮಾ ಡ್ಯಾಂ ಮೇಲೆ ದಾಳಿಗೆ ತಾಲಿಬಾನ್ ಯತ್ನ!

Webdunia
ಗುರುವಾರ, 5 ಆಗಸ್ಟ್ 2021 (08:09 IST)
ಕಾಬೂಲ್(ಆ.05): ಆಷ್ಘಾನಿಸ್ತಾನವನ್ನು ಮರಳಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಯತ್ನಿಸುತ್ತಿರುವ ತಾಲಿಬಾನ್ ಉಗ್ರರು, ಹೆರಾತ್ ಪ್ರಾಂತ್ಯದಲ್ಲಿ ಭಾರತ ಉಚಿತವಾಗಿ ನಿರ್ಮಿಸಿಕೊಟ್ಟಸಲ್ಮಾ ಅಣೆಕಟ್ಟಿನ ಮೇಲೆ ದಾಳಿ ನಡೆಸಲು ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆದರೆ ಉಗ್ರರ ಯತ್ನವನ್ನು ಸೇನೆ ವಿಫಲಗೊಳಿಸಿದ ಕಾರಣ, ದೊಡ್ಡ ಅಪಾಯವೊಂದು ತಪ್ಪಿದೆ.

‘ಹೆರಾತ್ ಪ್ರಾಂತ್ಯದಲ್ಲಿರುವ ಸಲ್ಮಾ ಡ್ಯಾಂ ಹೊಡೆದುರುಳಿಸಲು ತಾಲಿಬಾನ್ ಉಗ್ರರು ನಡೆಸಿದ ಪ್ರಯತ್ನ ವಿಫಲವಾಗಿದೆ. ಉಗ್ರರು ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಸಿದರು. ಈ ವೇಳೆ ಸೇನೆ ನಡೆಸಿದ ಪ್ರತಿದಾಳಿ ವೇಳೆ ತಾಲಿಬಾನ್ ಉಗ್ರರಲ್ಲಿ ಹಲವರಿಗೆ ತೀವ್ರ ಗಾಯಗಳಾಗಿವೆ. ಅವರು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ರಕ್ಷಣಾ ಇಲಾಖೆಯ ವಕ್ತಾರ ಫವಾದ್ ಅಮಾನ್ ತಿಳಿಸಿದ್ದಾರೆ.
ಸುಮಾರು 75000 ಹೆಕ್ಟೇರ್ ಕೃಷಿ ಭೂಮಿಗೆ ನೀರುಣಿಸುವ ಮತ್ತು 43 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಉದ್ದೇಶದಿಂದ ಹರಿ ನದಿಗೆ ಅಣೆಕಟ್ಟನ್ನು ಕಟ್ಟಲಾಗಿದೆ. ಸುಮಾರು 2100 ಕೋಟಿ ರು. ವೆಚ್ಚದ ಈ ಅಣೆಕಟ್ಟನ್ನು ಉಭಯ ದೇಶಗಳ ಸ್ನೇಹದ ಸಂಕೇತವಾಗಿ ಭಾರತ ನಿರ್ಮಿಸಿಕೊಟ್ಟಿತ್ತು. 2016ರಲ್ಲಿ ಇದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಷ್ಘಾನಿಸ್ತಾನ ಅಧ್ಯಕ್ಷ ಘನಿ ಜಂಟಿಯಾಗಿ ಉದ್ಘಾಟಿಸಿದ್ದರು.
ಇತ್ತೀಚೆಗೆ ಅಮೆರಿಕ ತನ್ನ ಸೇನೆಯನ್ನು ಹಿಂಪಡೆದ ಬಳಿಕ ತಾಲಿಬಾನ್ ಉಗ್ರರ ಜೊತೆ ಮತ್ತೆ ಕೈಜೋಡಿಸಿರುವ ಪಾಕಿಸ್ತಾನ ಸೇನೆ, ಭಾರತ ನಿರ್ಮಿಸಿದ ರಸ್ತೆಗಳು, ಅಣೆಕಟ್ಟು ಮತ್ತು ಇತರೆ ನಿರ್ಮಿತಿಗಳ ಮೇಲೆ ದಾಳಿಗೆ ಉಗ್ರರಿಗೆ ಸೂಚಿಸಿದೆ ಎಂದು ವರದಿಯಾಗಿತ್ತು. ಅದರ ಬೆನ್ನಲ್ಲೇ ಈ ದಾಳಿಯ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments