Select Your Language

Notifications

webdunia
webdunia
webdunia
webdunia

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

TVK Vijay

Krishnaveni K

ಚೆನ್ನೈ , ಶನಿವಾರ, 27 ಸೆಪ್ಟಂಬರ್ 2025 (21:27 IST)
ಚೆನ್ನೈ: ತಮಿಳು ನಟ, ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ರಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು 33 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ತಮಿಳುನಾಡಿನಲ್ಲಿ ಕರೂರಿನಲ್ಲಿ ರಾಲಿಯಲ್ಲಿ ವಿಜಯ್ ಭಾಗಿಯಾಗಿದ್ದರು. ಅವರನ್ನು ನೋಡಲು ನೂಕುನುಗ್ಗಲು ಉಂಟಾಗಿದ್ದು ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ವೇಳೆ ಕಾಲ್ತುಳಿತದಲ್ಲಿ ಮಕ್ಕಳು ಸೇರಿದಂತೆ 33 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಮೃತರು ಬಹುತೇಕ ಟಿವಿಕೆ ಪಕ್ಷದ ಬೆಂಬಲಿಗರು ಎನ್ನಲಾಗಿದೆ. ಸುಮಾರು 6 ಗಂಟೆಗಳ ಕಾಲ ಜನ ಕಾದು ನಿಂತಿದ್ದರು. ಆದರೆ ರಾಲಿ ತಡವಾಗಿ ಬಂದಿದ್ದರಿಂದ ಜನ ಸಂದಣಿ ಹೆಚ್ಚಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ತಕ್ಷಣವೇ ಸ್ಥಳಕ್ಕೆ ಅಂಬ್ಯುಲೆನ್ಸ್ ಗಳು ಬಂದಿದ್ದು ಮೃತದೇಹಗಳನ್ನು ಸಾಗಿಸಲಾಗಿದೆ. ಗಾಯಗೊಂಡವನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಎಂಕೆ ಸ್ಟಾಲಿನ್, ಇದು ಅತ್ಯಂತ ದುರದೃಷ್ಟಕರ ಘಟನೆ. ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ