Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ತಮಿಳರ ಮೇಲೆ ಹಲ್ಲೆ ವಿರೋಧಿಸಿ ನಾಳೆ ತಮಿಳುನಾಡು ಬಂದ್

ಕರ್ನಾಟಕದಲ್ಲಿ ತಮಿಳರ ಮೇಲೆ ಹಲ್ಲೆ ವಿರೋಧಿಸಿ ನಾಳೆ ತಮಿಳುನಾಡು ಬಂದ್
ಚೆನ್ನೈ , ಗುರುವಾರ, 15 ಸೆಪ್ಟಂಬರ್ 2016 (14:26 IST)
ಕರ್ನಾಟಕದಲ್ಲಿ ತಮಿಳರ ಮೇಲೆ ನಡೆದ ಹಲ್ಲೆ ಘಟನೆಗಳು ಮತ್ತು ಕಾವೇರಿ ವಿವಾದಕ್ಕೆ ದೀರ್ಘಾವಧಿಯ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿ ವ್ಯಾಪಾರಿ ಮತ್ತು ರೈತ ಸಂಘಟನೆಗಳು ನಾಳೆ ತಮಿಳುನಾಡು ಬಂದ್‌ಗೆ ಕರೆ ನೀಡಿವೆ.
 
ತಮಿಳುನಾಡು ಬಂದ್‌ಗೆ ಪ್ರಮುಖ ವಿಪಕ್ಷವಾದ ಡಿಎಂಕೆ ಸೇರಿದಂತೆ ಇತರ ಪಕ್ಷಗಳು ಬೆಂಬಲ ಸೂಚಿಸಿದ್ದು, ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. 
 
ಡಿಎಂಕೆ ಪಕ್ಷದ ಕಾರ್ಯಕರ್ತರು ತಮಿಳುನಾಡು ಬಂದ್‌ಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಕರೆ ನೀಡಿದ್ದಾರೆ.
 
ವಿಜಯ್‌ಕಾಂತ್ ನೇತೃತ್ವದ ಡಿಎಂಡಿಕೆ ಪಕ್ಷ ಚೆನ್ನೈನಲ್ಲಿರುವ ಕೇಂದ್ರ ಕಚೇರಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದೆ. ವಿಸಿಕೆ ಪಕ್ಷದ ಮುಖ್ಯಸ್ಥ ತಿರುಮವಲಾವನ್ ಬಂದ್ ಅಂಗವಾಗಿ ರೈಲ್ವೆ ತಡೆ ನಡೆಸುವುದಾಗಿ ಘೋಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಪತಂಜಲಿಯ ಆಚಾರ್ಯಗೆ 26ನೇ ಸ್ಥಾನ