ಭಾನುವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ತಿಳಿದು ಬಂದಿದೆ.
ಜಯಾ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದ್ದು ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದೆ. ಅವರು ಯಾವ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ ಎಂದು ತಿಳಿಸಿದೆ.
ಜೀವ ರಕ್ಷಕವನ್ನು ಅಳವಡಿಸಿ ಜಯಾರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ದಾಖಲಿಸಿಲಾಗಿರುವ ಚೆನ್ನೈನ ಅಪೋಲೋ ಆಸ್ಪತ್ರೆ ಮುಂದೆ ಸಾವಿರಾರು ಅಭಿಮಾನಿಗಳು ಗೋಳಾಡುತ್ತಿದ್ದಾರೆ. ಆಸ್ಪತ್ರೆ ಮುಂದೆ ಸೇರುತ್ತಿರುವ ಸಿಎಂ ಅಭಿಮಾನಿಗಳ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ.
ಹಣಕಾಸು ಸಚಿವ, ಜಯಾ ಬಲಗೈ ಬಂಟ ಪನ್ನಿರ್ ಸೆಲ್ವಂ, ಜಯಾ ಆಪ್ತ ಗೆಳತಿ ಶಶಿಕಲಾ ಆಸ್ಪತ್ರೆಯಲ್ಲಿ ಕಣ್ಣೀರು ಸುರಿಸುತ್ತಿದ್ದಾರೆ.
ಜಯಾಗೆ ಹೆಚ್ಚಿನ ಚಿಕಿತ್ಸೆ ನೀಡಲು ದೆಹಲಿಯ ಏಮ್ಸ್ನಿಂದ ತಜ್ಞ ವೈದ್ಯರು ಚೈನ್ನೈಗೆ ಆಗಮಿಸುತ್ತಿದ್ದು ಕೆಲವೇ ಕ್ಷಣಗಳಲ್ಲಿ ಅಪೋಲೋ ಆಸ್ಪತ್ರೆಯನ್ನು ತಲುಪಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.