Webdunia - Bharat's app for daily news and videos

Install App

ಜಯಲಲಿತಾ ಸಾವಿನ ಬಗ್ಗೆ ತನಿಖೆಗೆ ಆದೇಶಿಸಿದ ಸಿಎಂ ಪಳನಿಸ್ವಾಮಿ

Webdunia
ಗುರುವಾರ, 17 ಆಗಸ್ಟ್ 2017 (18:50 IST)
ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಎಐಎಡಿಎಂಕೆ ಎರಡು ಬಣಗಳ ವಿಲೀನಕ್ಕೆ ದಾರಿ ಮಾಡಿಕೊಡುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ದಿವಂಗತ ಜೆ. ಜಯಲಲಿತಾ ಸಾವಿನ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
ಜಯಲಲಿತಾ ಸಾವಿನ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಆಯೋಗ ರಚಿಸಲಾಗುವುದು. ಜಯಲಲಿತಾ ಅವರ ನಿವಾಸವನ್ನು ಸ್ಮಾರಕವಾಗಿ ಬದಲಿಸಲಾಗುವುದು ಎಂದು ತಿಳಿಸಿದ್ದಾರೆ. 
 
ಪನ್ನೀರ್ ಸೆಲ್ವಂ ನೇತೃತ್ವದ ಪುರಚಿ ತಲೈವಿ ಅಮ್ಮಾ ಬಣ, ಉಭಯ ಬಣಗಳ ಮಾತುಕತೆ ನಡೆಯಬೇಕಾದಲ್ಲಿ ಅಮ್ಮಾ(ಜಯಲಲಿತಾ) ಸಾವಿನ ಬಗ್ಗೆ ತನಿಖೆಯಾಗಬೇಕು ಎನ್ನುವ ಷರತ್ತನ್ನು ಸಿಎಂ ಪಳನಿಸ್ವಾಮಿಗೆ ವಿಧಿಸಿತ್ತು. 
 
ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಮುಖ್ಯ ಆರೋಪಿಯಾಗಿರುವ ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ವಿ.ಕೆ. ಶಶಿಕಲಾ ಮತ್ತು ಅವರ ಕುಟುಂಬದ ಸದಸ್ಯರನ್ನು ಪಕ್ಷದಿಂದ ಹೊರಹಾಕಬೇಕು ಎನ್ನುವುದು ಪನ್ನೀರ್‌ಸೆಲ್ವಂ ಬಣದ ಪ್ರಮುಖ ಬೇಡಿಕೆಯಾಗಿದೆ.
 
ಆಗಸ್ಟ್ 15 ರಂದು ಹಿರಿಯ ಎಐಎಡಿಎಂಕೆ (ಅಮ್ಮ) ನಾಯಕ ತಮಿಳುನಾಡು ಸಚಿವ ಕೆ.ಎ. ಸೆಂಗೊಟೈಯ್ಯನ್ ಮಾತನಾಡಿ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಬಣಗಳ ವಿಲೀನ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದರು.
 
ಮತ್ತೊಂದೆಡೆ, ಎಐಎಡಿಎಂಕೆ (ಅಮ್ಮ) ನಾಯಕ ಮತ್ತು ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್,  ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ನೇತೃತ್ವದ ಬಣಗಳು ನಮ್ಮ ವಿರುದ್ಧವಾದಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments