Webdunia - Bharat's app for daily news and videos

Install App

ಕಿಡ್ನಿ, ಅತಿಯಾದ ಮಧುಮೇಹ ಬಾಧೆ: ಹೆಚ್ಚಿನ ಚಿಕಿತ್ಸೆಗಾಗಿ ಜಯಲಲಿತಾ ಸಿಂಗಾಪುರಕ್ಕೆ

Webdunia
ಶನಿವಾರ, 24 ಸೆಪ್ಟಂಬರ್ 2016 (11:14 IST)
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. 

ಅವರಿಗೆ ಅತಿಯಾದ ಮಧುಮೇಹ ಮತ್ತು ಕಿಡ್ನಿ ಸಮಸ್ಯೆ ಉಂಟಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಪ್ರಯಾಣ ಬೆಳಸಲಿದ್ದಾರೆ ಎಂದು ಮಾಹಿತಿ ಲಭಿಸಿದೆ. 
 
ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಜಯಲಲಿತಾ (68) ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ನೋಡಿಕೊಳ್ಳಲಾಗುತ್ತಿತ್ತು. ಮತ್ತೀಗ ಅವರು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ. 
 
'ಅಮ್ಮ' ಆಸ್ಪತ್ರೆ ಸೇರಿರುವುದರಿಂದ ಆತಂಕಕ್ಕೆ ಒಳಗಾಗಿರುವ ನೂರಾರು ಅನುಯಾಯಿಗಳು, ಕಾರ್ಯಕರ್ತರು ಗುರುವಾರ ರಾತ್ರಿಯಿಂದ ಆಸ್ಪತ್ರೆಯ ಮುಂದೆ ಜಮಾಯಿಸಿದ್ದು, ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. 
 
ಈ ಹಿಂದೆ ಕೂಡ ಅವರ ಅನಾರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿರುವ ಬಗ್ಗೆ ಅಧಿಕೃತ ಪ್ರಕಟನೆಯನ್ನು ಹೊರಡಿಸಿರುವುದು ಇದೇ ಮೊದಲು.  
 
ಕಳೆದ ಕೆಲ ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿತ್ತು. ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಬಂದು ತಮ್ಮ ಸಚಿವಾಲಯದಿಂದ ಕಾರ್ಯ ನಿರ್ವಹಿಸದೇ ಮನೆಯಿಂದಲೇ ಅವರು ರಾಜ್ಯಭಾರವನ್ನು ಸಂಭಾಳಿಸುತ್ತಿದ್ದರು. ಈ ಕುರಿತು ವಿರೋಧ ಪಕ್ಷ ಡಿಎಂಕೆ ಸದಾ ಪ್ರಶ್ನೆಯನ್ನು ಎತ್ತುತ್ತಲೇ ಇತ್ತು. ಸಿಎಂ ಆರೋಗ್ಯ ಹೇಗಿದೆ ಎಂಬ ಮಾಹಿತಿ ನೀಡಿ ಎಂಬ ವಿರೋಧ ಪಕ್ಷ ಒತ್ತಾಯಿಸುತ್ತಿದ್ದರೂ ಜಯಲಲಿತಾ ಅದಕ್ಕೆ ತಲೆಕೆಡಿಸಿಕೊಂಡಿರಲಿಲ್ಲ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

ನಮ್ಮ ಗುರಿ ಭಯೋತ್ಪಾದಕರನ್ನು ಮಟ್ಟಹಾಕುವುದು: ಏರ್‌ ಮಾರ್ಷಕ್‌ ಎಕೆ ಭಾರ್ತಿ

ಕರ್ನಾಟಕ ಕಾಂಗ್ರೆಸ್ ಪ್ರಕಾರ ಕಾಶ್ಮೀರ ಪಾಕಿಸ್ತಾನ ಮ್ಯಾಪ್ ನಲ್ಲಿ: ಎಡವಟ್ಟು

India Pakistan: ಪಾಕಿಸ್ತಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ಟ್ರಂಪ್ ಹೇಳುವುದು ಬೇಡ: ಪ್ರಧಾನಿ ಮೋದಿ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

ಮುಂದಿನ ಸುದ್ದಿ
Show comments