ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ ಹೃದಯಾಘಾತಕ್ಕೊಳಗಾಗಿದ್ದಾರೆ. ಅಪೋಲೋ ಆಸ್ಪತ್ರೆಯಲ್ಲಿರುವ ಜಯಲಲಿತಾ ಚೇತರಿಕೆಗೆ ಎರಡು ವೈದ್ಯರ ತಂಡ ಶ್ರಮಿಸುತ್ತಿದೆ.
ತಮ್ಮ ಮೆಚ್ಚಿನ ನಾಯಕಿಗೆ ಹೃದಯಾಘಾತವಾದ ಸುದ್ದಿ ಕೇಳಿ ಅಪೋಲೋ ಆಸ್ಪತ್ರೆಯ ಹೊರಗೆ ಅವರ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು ಕಣ್ಣೀರಿಡುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ಇತ್ತೀಚೆಗಷ್ಟೇ ಅವರು ಚೇತರಿಸಿಕೊಳ್ಳುತ್ತಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿತ್ತು. ಆದರೆ ಇದರ ನಡುವೇ ಅವರಿಗೆ ಹೃದಯಾಘಾತವಾಗಿದ್ದು, ಆತಂಕ ಮೂಡಿಸಿದೆ. ಅವರ ಪರಿಸ್ಥಿತಿ ಬಗ್ಗೆ ಸದ್ಯಕ್ಕೆ ಏನೂ ಹೇಳಲಾಗದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ