Webdunia - Bharat's app for daily news and videos

Install App

ಕೇರಳ ಬಳಿಕ ತಮಿಳುನಾಡು ಲಾಕ್ಡೌನ್; ನೆರೆ ರಾಜ್ಯದಿಂದ ಕರ್ನಾಟಕಕ್ಕೆ ಸಂಕಷ್ಟ!

Webdunia
ಶುಕ್ರವಾರ, 30 ಜುಲೈ 2021 (20:28 IST)
ಚೆನ್ನೈ(ಜು.30): ದಕ್ಷಿಣ ಭಾರತದ ಒಂದೊಂದೆ ರಾಜ್ಯಗಳು ಲಾಕ್ಡೌನ್ ವಿಸ್ತರಣೆ ಮಾಡುತ್ತಿದೆ. ಕೇರಳ ಎರಡು ದಿನದ ಲಾಕ್ಡೌನ್ ಘೋಷಿಸಿದ ಬೆನ್ನಲ್ಲೇ ಇದೀಗ ತಮಿಳುನಾಡು ಲಾಕ್ಡೌನ್ ವಿಸ್ತರಿಸಿದೆ. ತಮಿಳುನಾಡಿನಲ್ಲಿ ಆಗಸ್ಟ್ 9ರ ವರೆಗೆ ಲಾಕ್ಡೌನ್ ವಿಸ್ತರಿಸಿದೆ. ಈ ಬೆಳವಣಿಗೆ ಕರ್ನಾಟಕದ ಆತಂಕ ಹೆಚ್ಚಿಸಿದೆ.

•ಕೊರೋನಾ ಏರಿಕೆ ಕಾರಣ ಲಾಕ್ಡೌನ್ ವಿಸ್ತರಿಸಿದ ತಮಿಳುನಾಡು
•ಕೊರೋನಾ ಗಣನೀಯ ಏರಿಕೆಯಿಂದ ಕೇರಳದಲ್ಲಿ 2 ದಿನ ಲಾಕ್ಡೌನ್
•ನೆರೆ ರಾಜ್ಯದಲ್ಲಿ ಕೊರೋನಾ ಹೆಚ್ಚಳದಿಂದ ಕರ್ನಾಟಕದಲ್ಲಿ ಆತಂಕ
ಕೇರಳದಲ್ಲಿ ಸತತ 4ನೇ ದಿನ 20,000ಕ್ಕೂ ಹೆಚ್ಚಿನ ಪ್ರಕರಣ ದಾಖಲಾಗಿದೆ. ಕೇರಳದಲ್ಲಿ ಕೊರೋನಾ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇತ್ತ ತಮಿಳುನಾಡಿನಲ್ಲೂ ಕೊರೋನಾ ಇಳಿಕೆಯಾಗುತ್ತಿಲ್ಲ. ಈ ಎರಡು ರಾಜ್ಯಗಳು ಲಾಕ್ಡೌನ್ ಮೊರೆ ಹೋಗಿವೆ. ಕೇರಳ ಹಾಗೂ ತಮಿಳುನಾಡಿನ ಜೊತೆ ಗಡಿ ಹಂಚಿಕೊಂಡಿರುವ ಕರ್ನಾಟಕ ಇದೀಗ ಸಂಕಷ್ಟಕ್ಕೆ ಸಿಲುಕಿದೆ.
ತಮಿಳುನಾಡಿನ 31 ಜೆಲ್ಲೆಗಳಲ್ಲಿ ಹೊಸ ಕೊರೋನಾ ಪ್ರಕರಣ ಸಂಖ್ಯೆ 100ಕ್ಕೂ ಹೆಚ್ಚು ದಾಖಲಾಗುತ್ತಿದೆ. ಕಳೆದ 24 ಗಂಟೆಯಲ್ಲಿ 2,000 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ಇಳಿಕೆಯಾಗುತ್ತಿದ್ದ ಕೊರೋನಾ ಪ್ರಕರಣ ನಿಧಾನವಾಗಿ ಏರಿಕೆಯಾಗುತ್ತಿದೆ.
ಕರ್ನಾಟಕದಲ್ಲಿ 28ರಲ್ಲಿ 1,531 ಹೊಸ ಕೊರೋನಾ ಪತ್ತೆಯಾಗಿತ್ತು. ಇನ್ನು ಜುಲೈ 29ಕ್ಕೆ ಕೊರೋನಾ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ನಿನ್ನೆ ಕರ್ನಾಟಕದಲ್ಲಿ 2,052 ಹೊಸ ಕೊರೋನಾ ಪತ್ತೆಯಾಗಿದೆ. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿದೆ.
ಪ್ರತಿ ದಿನ ಕರ್ನಾಟಕದಲ್ಲೂ ಕೊರೋನಾ ಕೇಸ್ ಹೆಚ್ಚಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ, ಒಂದೊಂದೆ ನಿರ್ಬಂಧಗಳು ಕರ್ನಾಟಕದಲ್ಲೂ ಜಾರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video, ಪಾಟ್ನಾ: ಹಾಡಹಗಲೇ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಐವರ ಗುಂಪು

ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡ್ತಿದೆ: ಛಲವಾದಿ ನಾರಾಯಣಸ್ವಾಮಿ

ಇಂಫಾಲ್‌ಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ಅಡಚಣೆ: ರಾಷ್ಟ್ರ ರಾಜಧಾನಿಗೆ ವಾಪಾಸ್ಸಾ ಇಂಡಿಗೋ ವಿಮಾನ

ಮಗ ರಾಜ್ಯಾಧ್ಯಕ್ಷನಾಗಿ ಮುಂದುವರೆಯಲು ಬಿಎಸ್‌ವೈ, ಸಿದ್ದರಾಮಯ್ಯ ಜತೆ ಅಡ್ಜಸ್ಟ್‌ಮೆಂಟ್: ಬಸನಗೌಡ ಯತ್ನಾಳ್ ಹೊಸ ಬಾಂಬ್

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆ, ಸಂಜೆ ಹುಷಾರು

ಮುಂದಿನ ಸುದ್ದಿ
Show comments