Webdunia - Bharat's app for daily news and videos

Install App

ಫೇಸ್‌ಬುಕ್‌ ಚಾಟ್‌ನಲ್ಲಿ ಪ್ರಧಾನಿ ಮೋದಿ ವಿರುದ್ಧ ಅಶ್ಲೀಲ ಪದ ಬಳಕೆ: ಯುವಕ ಅರೆಸ್ಟ್

Webdunia
ಗುರುವಾರ, 2 ನವೆಂಬರ್ 2017 (11:25 IST)
ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿಯವರನ್ನು ಅಸಭ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ವಿರುಧನಗರ್ ಜಿಲ್ಲೆಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕೆ.ಮಾರಿಮುತ್ತು ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಎಸ್.ತಿರುಮುರುಗನ್ ಎನ್ನುವ ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. 
 
ತಿರುಮುರುಗನ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಖ್ಯಾತ ನಟ ವಿಜಯ್ ಅಭಿಮಾನಿಯಾಗಿದ್ದಾನೆ. ನ್ಯಾಯಾಲಯ ತಿರುಮುರುಗನ್‌ಗೆ 15 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ. 
 
ನಟ ವಿಜಯ್ ನಟಿಸಿದ ಮೆರ್ಸಲ್ ಚಿತ್ರದಲ್ಲಿನ ವಿವಾದದ ಬಗ್ಗೆ ತಿರುಮುರುಗನ್ ನಡೆಸಿದ ಚಾಟ್‌ನ್ನು ಬಿಜೆಪಿ ಕಾರ್ಯದರ್ಶಿ ಮಾರಿಮುತ್ತು ಶೇರ್ ಮಾಡಿದ್ದಾರೆ.  ನಾನು ನಟ ವಿಜಯ್‌ರನ್ನು ಟೀಕಿಸಿಲ್ಲ. ಜಿಎಸ್‌ಟಿ ಬಗ್ಗೆ ಸತ್ಯಸಂಗತಿಗಳನ್ನು ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದ್ದಾರೆ. 
 
ಫೇಸ್‌ಬುಕ್‌ನಲ್ಲಿ ತಿರುಮುರುಗನ್ ಬಳಸಿದ ಶಬ್ದಗಳು ಸಾರ್ವಜನಿಕವಾಗಿ ಲಭ್ಯವಿವೆ. ಅದರಲ್ಲಿರುವ ಕೆಟ್ಟ ಪದ ಬಳಕೆ ಪ್ರಧಾನಿ ಮೋದಿಯವರ ಘನತೆ, ಗೌರವಕ್ಕೆ ಧಕ್ಕೆ ತರಲಿದೆ. ಫೇಸ್‌ಬುಕ್‌ನಲ್ಲಿ ಬಳಸಿದ ಕೆಟ್ಟ ಪದಗಳು ನನಗೆ ಹೇಳಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ಮೋದಿಯವರನ್ನು ಹೀಗೆ ಟೀಕಿಸುತ್ತಾರಾ? ಎಂದು ನಾನು ಕೇಳಿದಕ್ಕೆ ತಿರುಮುರುಗನ್, ನಾನು ಹಾಗೇ ಟೀಕಿಸುವುದು ಎಂದು ಹೇಳಿದ್ದಾಗಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಾರಿಮುತ್ತು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments