Webdunia - Bharat's app for daily news and videos

Install App

ವಿಶ್ವಾಸಮತಯಾಚನೆ: ಸ್ಪೀಕರ್ ಮೈಕ್ ಕಿತ್ತು, ಟೇಬಲ್ ಪುಡಿ ಪುಡಿ ಮಾಡಿದ ವಿಪಕ್ಷಗಳು

Webdunia
ಶನಿವಾರ, 18 ಫೆಬ್ರವರಿ 2017 (12:26 IST)
ತಮಿಳುನಾಡು ವಿಧಾನಸಭೆಯ ಸಭಾಪತಿ ಧನಪಾಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಸ್ಪೀಕರ್ ಮುಂದಿದ್ದ ಮೈಕ್ ಕಿತ್ತುಹಾಕಿ, ಟೇಬಲ್ ಪುಡಿ ಪುಡಿ ಮಾಡಿದ ಘಟನೆ ವರದಿಯಾಗಿದೆ.
 
 ವಿಶ್ವಾಸಮತ ಯಾಚನೆಯಲ್ಲಿ ಯಾಕೆ ತರಾತುರಿ ಮಾಡಲಾಗುತ್ತಿದೆ. ರೆಸಾರ್ಟ್ ವಿಷಯ ಪ್ರಸ್ತಾಪಿಸಲು ಸಭಾಪತಿ ಯಾಕೆ ಬಿಡುತ್ತಿಲ್ಲ. ಚರ್ಚೆಗೆ ಅವಕಾಶ ಕೊಡದೆ ಮತದಾನಕ್ಕೆ ಯಾಕೆ ಅನುಮತಿ ನೀಡಲಾಗುತ್ತಿದೆ ಎಂದು ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ವಿಶ್ವಾಸಮತಯಾಚನೆ ಮುಂದೂಡಿ ಚರ್ಚೆಗೆ ಅವಕಾಶ ಕೊಡಿ. ಪ್ರಜಾತಂತ್ರದಲ್ಲಿ ಪ್ರಜಾ ವ್ಯವಸ್ಥೆಗೆ ಅವಕಾಶ ನೀಡುವುದು ಅಗತ್ಯ ಎಂದು ಮಾಜಿ ಸಿಎಂ ಪನ್ನೀರ್ ಸೆಲ್ವಂ ಒತ್ತಾಯಿಸಿದ್ದಾರೆ.
 
ವಿಪಕ್ಷಗಳ ಮುಖಂಡರ ಸಲಹೆಗಳನ್ನು ಸಭಾಪತಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸದಸ್ಯರು ಸ್ಪೀಕರ್ ಮೈಕ್ ಕಿತ್ತು ಹಾಕಿ ಟೇಬಲ್ ಪುಡಿ ಪುಡಿ ಮಾಡಿದ್ದಾರೆ. ಟೇಬಲ್ ಮೇಲಿದ್ದ ಫೈಲ್‌ಗಳನ್ನು ಕಿತ್ತು ಹಾಕಿ ಕೋಪವನ್ನು ಹೊರಹಾಕಿದ್ದಾರೆ.
 
ಸದಸ್ಯರ ಗದ್ದಲದಿಂದ ವಿಚಲಿತರಾದ ಸ್ಪೀಕರ್ ಧನಪಾಲ್, ಕಲಾಪವನ್ನು ಒಂದು ಗಂಟೆ ಮುಂದೂಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments