Select Your Language

Notifications

webdunia
webdunia
webdunia
webdunia

ತಮಿಳುನಾಡು: "ಅಮ್ಮ"ನ ಕ್ಷೇತ್ರದಲ್ಲಿ ಏ.12 ರಂದು ವೋಟಿಂಗ್

ತಮಿಳುನಾಡು:
ಚೆನ್ನೈ , ಗುರುವಾರ, 9 ಮಾರ್ಚ್ 2017 (15:15 IST)
ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ನಿಧನದಿಂದ ತೆರವಾದ ಆರ್.ಕೆ.ನಗರ್ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 12 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಿದೆ.
 
ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅನಾರೋಗ್ಯದಿಂದಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದರು. ಇದೀಗ ಅವರ ನಿಧನದಿಂದ ಆರ್‌.ಕೆ.ನಗರ್ ವಿಧಾನಸಭಾ ಕ್ಷೇತ್ರ ತೆರವಾಗಿದೆ. 
 
ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಮತ್ತು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣ ವಿಭಜನೆಯಾಗಿದ್ದರಿಂದ ಪಕ್ಷದಿಂದ ಯಾವ ಬಣದ ಮುಖಂಡ ಅಭ್ಯರ್ಥಿಯಾಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ