Webdunia - Bharat's app for daily news and videos

Install App

ನವವಿವಾಹಿತರು ಬೇಗ ಮಕ್ಕಳ ಮಾಡಿಕೊಳ್ಳಬೇಕು ತಮಿಳು ಹೆಸರು ಇಡಬೇಕು: ಸಿಎಂ ಎಂಕೆ ಸ್ಟಾಲಿನ್ ಆರ್ಡರ್

Krishnaveni K
ಸೋಮವಾರ, 3 ಮಾರ್ಚ್ 2025 (14:08 IST)
ಚೆನ್ನೈ: ಕೇಂದ್ರದ ವಿರುದ್ಧ ಹಿಂದಿ ವಿರೋಧಿ ಮತ್ತು ಜನಸಂಖ್ಯೆ ಆಧಾರಿತವಾಗಿ ಕ್ಷೇತ್ರ ವಿಂಗಡಣೆ ಮಾಡುವ ನಿರ್ಧಾರದ ವಿರುದ್ಧ ಹೋರಾಟಕ್ಕಿಳಿದಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಈಗ ತಮಿಳುನಾಡಿನ ನವವಿವಾಹಿತರು ಬೇಗ ಬೇಗ ಮಕ್ಕಳನ್ನು ಮಾಡಿಕೊಳ್ಳಿ, ಅವುಗಳಿಗೆ ತಮಿಳು ಹೆಸರುಗಳನ್ನೇ ಇಡಿ ಎಂದು ಆರ್ಡರ್ ಕೊಟ್ಟಿದ್ದಾರೆ!

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಹಿಂದಿ ಮತ್ತು ಸಂಸ್ಕೃತ ಹೇರಿಕೆಯ ಭಾಗ ಎಂದು ಎಂಕೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಬಿಡಲ್ಲ ಎಂದಿದ್ದಾರೆ. ಪ್ರಾದೇಶಿಕ ಭಾಷೆಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದಿದ್ದರು. ಇದರ ಜೊತೆಗೆ ಕ್ಷೇತ್ರ ಮರುವಿಂಗಡಣೆ ಮಾಡುವ ಸುಳಿವನ್ನು ಕೇಂದ್ರ ನೀಡಿತ್ತು. ಇದರ ವಿರುದ್ಧ ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳು ಪ್ರತಿರೋಧ ವ್ಯಕ್ತಪಡಿಸಿವೆ.

ಈ ನಿಟ್ಟಿನಲ್ಲಿ ತಮಿಳುನಾಡು ಸಿಎಂ ನವವಿವಾಹಿತರಿಗೆ ಬೇಗನೇ ಮಗು ಮಾಡಿಕೊಳ್ಳಲು ಸಲಹೆ ನೀಡಿದ್ದಾರೆ. ತಮಿಳುನಾಡಿನ ಡಿಎಂಕೆ ನಾಯಕರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾದ ಎಂಕೆ ಸ್ಟಾಲಿನ್ ಈ ಕರೆ ಕೊಟ್ಟಿದ್ದಾರೆ.

‘ಇಷ್ಟು ದಿನ ಮದುವೆ ಬಳಿಕ ದಂಪತಿಗಳು ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಬೇಕು. ಮಕ್ಕಳನ್ನು ಹಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳಲಿ ಎಂಬುದು ನಮ್ಮ ಅಭಿಪ್ರಾಯವಾಗಿತ್ತು. ಆದರೆ ಈಗ ನವ ದಂಪತಿಗಳು ಬೇಗನೇ ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದೇನೆ. ಬೇಗನೇ ಮಕ್ಕಳನ್ನು ಮಾಡಿಕೊಂಡು ಅವುಗಳಿಗೆ ತಮಿಳು ಹೆಸರುಗಳನ್ನೇ ಇಡಬೇಕು. 2026 ಕ್ಕೆ ಮೊದಲು ಜನ ಸಂಖ್ಯೆ ಆಧಾರಿತವಾಗಿ ಕ್ಷೇತ್ರ ಮರುವಿಂಗಡಣೆ ಮಾಡುವ ಮೊದಲೇ ಮಕ್ಕಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಗಮನಹರಿಸಬೇಕು. ಇಲ್ಲದೇ ಹೋದರೆ ದಕ್ಷಿಣದ ರಾಜ್ಯಗಳ ಸಂಸದೀಯ ಕ್ಷೇತ್ರಗಳು ಕಡಿಮೆಯಾಗಲಿದೆ’ ಎಂದು ಸ್ಟಾಲಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ದೇಶದ ಸೈನಿಕರಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ: ಜಮೀರ್ ಅಹ್ಮದ್‌

India Pakistan: ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ

Operation Sindoor ಮೂಲಕ ಹಳೆಯ ಸೇಡು ತೀರಿಸಿಕೊಂಡ ಅಜಿತ್ ದೋವಲ್

Operation Sindoor: ಗಡಿಯಲ್ಲಿ ಉದ್ವಿಗ್ನತೆ, ಪಂಜಾಬ್‌ನ ಆರು ಜಿಲ್ಲೆಗಳಲ್ಲಿ11ರವರೆಗೆ ಶಾಲೆಗಳಿಗೆ ರಜೆ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ

ಮುಂದಿನ ಸುದ್ದಿ
Show comments