Webdunia - Bharat's app for daily news and videos

Install App

ತಮಿಳುನಾಡು ಬಿಕ್ಕಟ್ಟು: ಇಂದು ಸಂಜೆ ಗವರ್ನರ್‌ರಿಂದ ಮಹತ್ವದ ನಿರ್ಧಾರ

Webdunia
ಬುಧವಾರ, 15 ಫೆಬ್ರವರಿ 2017 (16:21 IST)
ತಮಿಳುನಾಡಿನಲ್ಲಿ ಎದುರಾಗಿರುವ ರಾಜಕೀಯ ಬಿಕ್ಕಟ್ಟು ಶಮನಗೊಳಿಸಲು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಇಂದು ಸಂಜೆ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಎಐಎಡಿಎಂಕೆ ಮುಖಂಡ ಮಾಜಿ ಸಚಿವ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜ್ಯಪಾಲರನ್ನು ಭೇಟಿ ಮಾಡಿ ಬಹುಮತ ಸಾಬೀತಿಗೆ ಅವಕಾಶ ನೀಡುವಂತೆ ಕೋರಿದ್ದಾರೆ.
 
ಮತ್ತೊಂದೆಡೆ ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ, ತಮ್ಮ ಮೇಲೆ ಒತ್ತಡ ಹೇರಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಾಯಿತು ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕಾನೂನು ತಜ್ಞರ ಪ್ರಕಾರ ಸೆಲ್ವಂ ತಮ್ಮ ಮೇಲೆ ಹೇರಿದ ಒತ್ತಡವನ್ನು ಸಾಬೀತುಪಡಿಸಿದಲ್ಲಿ ರಾಜ್ಯಪಾಲರು ರಾಜೀನಾಮೆಯನ್ನು ತಿರಸ್ಕರಿಸಬಹುದಾಗಿದೆ ಎಂದು ಹೇಳಲಾಗುತ್ತಿದೆ.
 
ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ಸಂಜೆ ಪಳನಿಸ್ವಾಮಿಯವರನ್ನು ಸರಕಾರ ರಚಿಸಲು ಆಹ್ವಾನ ನೀಡುತ್ತಾರೋ ಅಥವಾ ಪನ್ನೀರ್ ಸೆಲ್ವಂಗೆ ಮುಂದುವರಿಯುವಂತೆ ಅಥವಾ ಬಹುಮತ ಸಾಬೀತುಪಡಿಸುವಂತೆ ಕೋರುತ್ತಾರೋ ಎನ್ನುವುದು ಕಾದು ನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments