Webdunia - Bharat's app for daily news and videos

Install App

ರಾಜ್ಯಪಾಲ, ರಾಷ್ಟ್ರಪತಿಗಳ ಅಂಕಿತವಿಲ್ಲದೇ ಕಾಯಿದೆ ಜಾರಿಗೊಳಿಸಿದ ತಮಿಳುನಾಡು

Krishnaveni K
ಶನಿವಾರ, 12 ಏಪ್ರಿಲ್ 2025 (16:54 IST)
ಚೆನ್ನೈ: ಸಾಮಾನ್ಯವಾಗಿ ಯಾವುದೇ ಕಾಯಿದೆಗಳು ಜಾರಿಯಾಗಬೇಕಾದರೆ ರಾಜ್ಯಪಾಲರ ಅಥವಾ ರಾಷ್ಟ್ರಪತಿಗಳ ಅಂಕಿತ ಬೇಕು. ಆದರೆ ತಮಿಳುನಾಡು ಈಗ ಹೊಸ ಇತಿಹಾಸ ಬರೆದಿದೆ. ರಾಜ್ಯಪಾಲರು, ರಾಷ್ಟ್ರಪತಿಗಳ ಅಂಕಿತವಿಲ್ಲದೇ 10 ಕಾಯಿದೆಗಳನ್ನು ಜಾರಿಗೆ ತಂದಿದೆ.
 

ತಮಿಳುನಾಡಿನಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ತಿಕ್ಕಾಟ ಹೊಸದೇನಲ್ಲ. ಇದೀಗ ಇದು ಇನ್ನೊಂದು ಹಂತಕ್ಕೆ ಹೋಗಿದೆ. ಮೊನ್ನೆಯಷ್ಟೇ ರಾಜ್ಯಪಾಲರು ಸಹಿ ಹಾಕದೇ ಕಡತವಿಟ್ಟುಕೊಂಡಿದ್ದ ವಿಚಾರವಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಸರ್ಕಾರಕ್ಕೆ ಗೆಲುವಾಗಿತ್ತು.

ಪ್ರಜಾಪ್ರಭುತ್ವದಲ್ಲಿ ರಾಜ್ಯಪಾಲರು ಸರ್ಕಾರ ಕಳುಹಿಸಿದ ಕಡತಗಳನ್ನು ಸಹಿ ಹಾಕದೇ ಇಟ್ಟುಕೊಳ್ಳುವಂತಿಲ್ಲ. ಆದರೆ ತಮಿಳುನಾಡು ರಾಜ್ಯಪಾಲರು ಈ ರೀತಿ ಕಡತಗಳನ್ನು ಸಹಿ ಹಾಕದೇ ಇಟ್ಟುಕೊಂಡಿದ್ದಕ್ಕೆ ಸುಪ್ರೀಂ ಚಾಟಿ ಬೀಸಿತ್ತು.

ಇದೀಗ ತಮಿಳುನಾಡು ಸರ್ಕಾರ ರಾಜ್ಯಪಲಾರನ್ನು ಧಿಕ್ಕರಿಸಿ ಕಾಯಿದೆಗಳನ್ನು ಜಾರಿಗೆ ತಂದಿದೆ. 2020 ರಿಂದ 2023 ರವರೆಗೆ ಅಂಗೀಕರವಾದ ಮಸೂದೆಗಳನ್ನು ತಮಿಳುನಾಡು ಸರ್ಕಾರ ರಾಜ್ಯಪಾಲರ ಅಂಕಿತವಿಲ್ಲದೇ ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಜಾರಿಗೆ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments