Webdunia - Bharat's app for daily news and videos

Install App

ತಮಿಳುನಾಡು ಶಾಸಕರ ಸಂಬಳ ಶೇ.100ರಷ್ಟು ಹೆಚ್ಚಳ.. ರೈತರಿಗಿಂತ ಸಂಬಳವೇ ಮುಖ್ಯವಾಯ್ತಾ..?

Webdunia
ಬುಧವಾರ, 19 ಜುಲೈ 2017 (17:14 IST)
ಸಾಲ ಮನ್ನಾಕ್ಕೆ ಒತ್ತಾಯಿಸಿ ತಮಿಳುನಾಡು ರೈತರು ಹೋರಾಟ ನಡೆಸುತ್ತಿದ್ದರೆ ಇತ್ತ ಶಾಸಕರಿಗೆ ಶೇ. 100ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. 50,000 ರೂ. ಇದ್ದ ಶಾಸಕರ ಸಂಭಾವನೆಯನ್ನ 1.05 ಲಕ್ಷಕ್ಕೆ ಏರಿಸಲಾಗಿದೆ.
 

 ಶಾಸಕರ ಪಿಂಚಣಿ ಸಹ 12,000 ರೂ.ನಿಂದ 20,000 ರೂ.ಗೆ ಏರಿಸಲಾಗಿದೆ. ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿ ಸಹ 2 ರಿಂದ 2.6 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಬುಧವಾರ ವಿಧಾನಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.

ಆದರೆ, ತಮಿಳುನಾಡು ರೈತರು ದೆಹಲಿಯ ಜಂತರ್ ಮಂತರ್`ನಲ್ಲಿ ಸುದೀರ್ಘ ಪ್ರತಿಭಟನೆ ನಡೆಸಿದ್ದರು. ಅರೆಬೆತ್ತಲೆ, ಸತ್ತ ಇಲಿ ತಿನ್ನುವ ಮೂಲಕ ಪ್ರತಿಭಟನೆ ನಡೆಸಿದ್ದರು. ಆದರೆ, ರೈತರ ನೆರವಿಗೆ ಧಾವಿಸದ ಸರ್ಕಾರ ಶಾಸಕರ ಸಂಬಳವನ್ನ ಹೆಚ್ಚಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಒಡೆದು ಹೋಳಾಗಿರುವ ಆಡಳಿತ ಪಕ್ಷದ ಶಾಸಕರನ್ನ ಜೊತೆಯಲ್ಲೇ ಇಟ್ಟುಕೊಳ್ಳಲು ಸಂಬಳ ಹೆಚ್ಚಿಸಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments