Select Your Language

Notifications

webdunia
webdunia
webdunia
webdunia

ತಾಂಜೇನಿಯಾ ಘಟನೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ರಾಹುಲ್ ಆದೇಶ

ತಾಂಜೇನಿಯಾ ಘಟನೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ರಾಹುಲ್ ಆದೇಶ
ನವದೆಹಲಿ , ಶುಕ್ರವಾರ, 5 ಫೆಬ್ರವರಿ 2016 (15:55 IST)
ತಾಂಜೇನಿಯಾ ಮೂಲದ ಯುವತಿಯ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾಗಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯುವತಿ ಮೇಲೆ ನಡೆದ ಹಲ್ಲೆ ತೀವ್ರ ಖಂಡನೀಯ.ಇಂತಹ ಘಟನೆ ಪುನರಾವರ್ತನೆಯಾಗಬಾರದು ಎಂದರು.
 
ಈಗಾಗಲೇ ಐವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.
 
ಗೃಹ ಸಚಿವ ಜಿ ಪರಮೇಶ್ವರ್ ಮಹಿಳೆಯ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಬಿಜೆಪಿ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

Share this Story:

Follow Webdunia kannada