Webdunia - Bharat's app for daily news and videos

Install App

ರಾಹುಲ್ ಗಾಂಧಿ ಪ್ರಧಾನಿಯಾಗಬೇಕಾದರೆ ಬ್ರಾಹ್ಮಣ ಯುವತಿಯನ್ನು ಮದುವೆಯಾಗಬೇಕಂತೆ!

Webdunia
ಶುಕ್ರವಾರ, 6 ಜುಲೈ 2018 (09:46 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಪ್ರಧಾನಿಯಾಗಬೇಕೆಂದು ಕನಸು ಕಾಣುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತೆಲುಗುದೇಶಂ ಪಾರ್ಟಿ ಸಂಸದರೊಬ್ಬರು ಭಾರೀ ಐಡಿಯಾ ಕೊಟ್ಟಿದ್ದಾರೆ!

ಮುಂದೆ ಪ್ರಧಾನಿಯಾಗಬೇಕೆಂದಿದ್ದರೆ ಉತ್ತರ ಪ್ರದೇಶದಿಂದ ಬ್ರಾಹ್ಮಣ ಕನ್ಯೆಯೊಬ್ಬಳನ್ನು ಹುಡುಕಿ ಮದುವೆಯಾಗಿ ಎಂದು ಟಿಡಿಪಿ ಸಂಸದ ಜೆಸಿ ದಿವಾಕರ್ ರೆಡ್ಡಿ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡುವಾಗ ಸಂಸದ ರೆಡ್ಡಿ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ. ‘ಹಿಂದೆಯೂ ನಾನು ಸೋನಿಯಾ ಗಾಂಧಿಯವರಿಗೆ ಇದೇ ಸಲಹೆ ನೀಡಿದ್ದೆ. ರಾಹುಲ್ ಪ್ರಧಾನಿಯಾಗಬೇಕಾದರೆ ಉತ್ತರ ಪ್ರದೇಶದ ಬ್ರಾಹ್ಮಣ ಯುವತಿಯನ್ನು ಮದುವೆ ಮಾಡಿಸಿ. ಪ್ರಧಾನಿಯಾಗಬೇಕಾದರೆ ಉತ್ತರ ಪ್ರದೇಶದವರ ಆಶೀರ್ವಾದ ಬಹಳ ಮುಖ್ಯ’ ಎಂದು ರೆಡ್ಡಿ ಹೇಳಿಕೊಂಡಿದ್ದಾರೆ. ಅಂತೂ ರಾಹುಲ್ ಮದುವೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಾರೋ ಇಲ್ಲವೋ, ಆದರೆ ಬೇರೆ ಬೇರೆ ರಾಜಕೀಯ ನಾಯಕರು ಮಾತ್ರ ಆಗಾಗ ಇದರ ಬಗ್ಗೆ ಪ್ರಸ್ತಾಪವಿಡುತ್ತಲೇ ಇರುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments