Webdunia - Bharat's app for daily news and videos

Install App

ಮುಂಬೈನ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ: ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದೇನು

Sampriya
ಶುಕ್ರವಾರ, 24 ಜನವರಿ 2025 (14:12 IST)
Photo Courtesy X
ಮುಂಬೈ: ನಾಲ್ಕು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ರೈಲು ಅವಘಡದಲ್ಲಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಶ್ರಾವಸ್ತಿಯ ಮೂಲದ ಇಬ್ಬರು ಅಲ್ಲಿದ್ದ ಇತರರಿಗೂ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ತಮ್ಮ ರಕ್ಷಣೆಗಾಗಿ ರೈಲಿನ ಅಲಾರಾಂ ಚೈನ್‌ನ್ನು ಎಳೆದು ರೈಲನ್ನು ನಿಲ್ಲಿಸಿದ್ದಾರೆ.

ರೈಲಿನಿಂದ ಇಳಿದ ಪ್ರಯಾಣಿಕರು ಪಕ್ಕದ ರೈಲು ಹಳಿಯ ಮೇಲೆ ನಿಂತಿದ್ದಾರೆ. ಇದೇ ವೇಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರು ನಿಂತಿದ್ದ ಹಳಿಯ ಮೇಲೆ ಬಂದಿದೆ. ಪರಿಣಾಮ ಹಳಿಯ ಮೇಲಿಂದ ಇಳಿಯದೇ ಅಲ್ಲೇ ನಿಂತಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಸದ್ಯ ಮೃತರ ಪೈಕಿ 10 ಜನರನ್ನು ಗುರುತಿಸಲಾಗಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ರೈಲ್ವೆ ಇಲಾಖೆ ಮೃತರ ಕುಟುಂಬಸ್ಥರಿಗೆ ₹1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಂಭವಿಸಿದ ಅಪಘಾತದಲ್ಲಿ ರೈಲ್ವೆಯಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ. 4.45ಕ್ಕೆ ಪುಷ್ಪಕ್ ಎಕ್ಸ್ಪ್ರೆಸ್ ನಿಂತ 20 ನಿಮಿಷಗಳ ಬಳಿಕ 5.05ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದೆ. ಆದರೆ, ಜನರು ಹಳಿ ಬಿಟ್ಟು ಕದಡದ ಕಾರಣ ದುರಂತ ಆಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments