Webdunia - Bharat's app for daily news and videos

Install App

ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಓಡಿ ಹೋಗಲು ಯತ್ನಿಸಿದ ಶಿಕ್ಷಕಿ

Webdunia
ಮಂಗಳವಾರ, 31 ಅಕ್ಟೋಬರ್ 2023 (14:15 IST)
ಶಿಕ್ಷಕಿ ಮತ್ತು ವಿದ್ಯಾರ್ಥಿ ಇಬ್ಬರು ದೆಹಲಿಗೆ ಹೋಗಲು ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಭೋಪಾಲ್‌ನಲ್ಲಿ ರೈಲ್ವೆ ಪೊಲೀಸರು ಇಬ್ಬರನ್ನು ಬಂಧಿಸಿ, ಪೋಷಕರಿಗೆ ಮಾಹಿತಿ ನೀಡಿದ್ದಾರೆ.
 
 
ಹೈದರಾಬಾದ್‌ನಲ್ಲಿ 28 ವರ್ಷ ವಯಸ್ಸಿನ ಶಿಕ್ಷಕಿಯೊಬ್ಬಳು ತನ್ನ 14 ವರ್ಷದ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಪ್ರೇಮದಲ್ಲಿ ಸಿಲುಕಿ ಓಡಿ ಹೋಗಲು ಯತ್ನಿಸಿದ ವಿಚಿತ್ರ ಘಟನೆ ವರದಿಯಾಗಿದೆ.

ಬಾಲಕನ ಪೋಷಕರು ಭೋಪಾಲ್‌ ಪೊಲೀಸ್ ಠಾಣೆಗೆ ಆಗಮಿಸಿದ್ದು, ಶಿಕ್ಷಕಿಯ ಪೋಷಕರು ಕೂಡಾ ಪೊಲೀಸ್ ಠಾಣೆಗೆ ಆಗಮಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ರೈಲ್ವೆ ಪೊಲೀಸರ ಪ್ರಕಾರ, ಇಬ್ಬರು ಹೈದ್ರಾಬಾದ್ ಮೂಲದವರಾಗಿದ್ದು 28 ವರ್ಷ ವಯಸ್ಸಿನ ಶಿಕ್ಷಕಿ ಟ್ಯೂಶನ್ ಹೇಳಿಕೊಡಲು ಬಾಲಕನ ಮನೆಗೆ ಬರುತ್ತಿದ್ದಳು. ಇಬ್ಬರು ಪ್ರೇಮಪಾಶದಲ್ಲಿ ಸಿಲುಕಿದ್ದಾರೆ. ನಂತರ ದೆಹಲಿಗೆ ಓಡಿಹೋಗಲು ನಿರ್ಧರಿಸಿದಾಗ ಭೋಪಾಲ್‌ ಪೊಲೀಸರ ಬಲೆಗೆ ಸಿಲುಕಿದ್ದಾರೆ.
 
14 ವರ್ಷದ ಹುಡುಗನ ಕುಟುಂಬವು ಹೈದರಾಬಾದ್ನಲ್ಲಿ ಅವರ ಕಣ್ಮರೆಗೆ ಸಂಬಂಧಿಸಿದಂತೆ ಕಳೆದುಹೋದ ವರದಿಯನ್ನು ದಾಖಲಿಸಿದೆ. ಅದರ ನಂತರ ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ. ಕಳೆದ ಆಕ್ಟೋಬರ್ 2 ರಂದು ಬಾಲಕನ ಪೋಷಕರು ಪುತ್ರಕಾಣೆಯಾಗಿರುವ ಬಗ್ಗೆ ಹೈದ್ರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಬಾಲಕನ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದರು.
 
ಇಬ್ಬರೂ ದೆಹಲಿಗೆ ತೆಲಂಗಾಣ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೋಗಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ದೊರೆತಿತ್ತು ಎನ್ನಲಾಗಿದೆ. 
 
ಈ ಬಗ್ಗೆ ಹೈದರಾಬಾದ್ ಪೊಲೀಸರು ಬಾಲಕನನ ಛಾಯಾಚಿತ್ರವನ್ನು ವಾಟ್ಸಪ್‌ ಮೂಲಕ ಭೋಪಾಲ್ ರೈಲ್ವೆ ಪೊಲೀಸ್‌ಗೆ ರವಾನಿಸಿ ಸಹಾಯ ಕೋರಿದ್ದರು.ಮತ್ತೊಂದೆಡೆ ಶಿಕ್ಷಕಿ ತಮ್ಮ ಪುತ್ರನನ್ನು ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿದ್ದಾಳೆ ಎಂದು ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ಮಾತ್ರನಾ, ನಮ್ಮನ್ನೂ ಫ್ರೆಂಡ್ ಮಾಡ್ಕೊಳ್ಳಿ: ರಷ್ಯಾಗೆ ದುಂಬಾಲು ಬಿದ್ದ ಪಾಕ್ ಪ್ರಧಾನಿ

ಜಿಎಸ್ ಟಿ ಕಡಿತವಾದ್ರೆ ಜನರಿಗೆ ಲಾಭ: ಇಂಡಿಯಾ ಒಕ್ಕೂಟದ ರಾಜ್ಯಗಳ ವಿರೋಧ ಯಾಕೆ

ಹೆರಿಗೆ ಆಸ್ಪತ್ರೆ ಮಾಡ್ಸಿ ಎಂದರೆ, ನಿಮ್ಮ ಹೆರಿಗೆ ಆಗ್ಲಿ ಎಂದು ಆರ್ ವಿ ದೇಶಪಾಂಡೆ ಉಡಾಫೆ ಉತ್ತರ

Arecanut Price: ಅಡಿಕೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್ ಬೆಲೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments