Webdunia - Bharat's app for daily news and videos

Install App

ಮದುವೆಯಾಗಲು ಒಪ್ಪದ 9 ನೇ ತರಗತಿ ವಿದ್ಯಾರ್ಥಿನಿಯ ಕತ್ತು ಸೀಳಿದ ಶಿಕ್ಷಕ

Webdunia
ಭಾನುವಾರ, 4 ನವೆಂಬರ್ 2018 (09:09 IST)
ನವದೆಹಲಿ: ತನ್ನನ್ನು ಮದುವೆಯಾಗಲು ಒಪ್ಪದ 9 ನೇ ತರಗತಿಯ ವಿದ್ಯಾರ್ಥಿನಿಯನ್ನು ಶಿಕ್ಷಕನೇ ಕತ್ತು ಸೀಳಿ ಕೊಲೆಗೈಯಲು ಯತ್ನಿಸಿದ ಘಟನೆ ಆಂಧ್ರಪ್ರದೇಶದ ಕುರ್ನೂಲ್ ನಲ್ಲಿ ನಡೆದಿದೆ.

ಅದೃಷ್ಟವಶಾತ್ ವಿದ್ಯಾರ್ಥಿನಿ ಬದುಕುಳಿದಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆಯ ಕೂಗು ಕೇಳಿ ನೆರೆ ಹೊರೆಯವರು ಈಕೆಯನ್ನು ರಕ್ಷಿಸಿದ್ದಲ್ಲದೆ, ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಆರೋಪಿ ವಿದ್ಯಾರ್ಥಿನಿಯ ಹಿಂದಿ ಶಿಕ್ಷಕನಾಗಿದ್ದು, ಕಳೆದ ಒಂದು ವರ್ಷದಿಂದ ಬಾಲಕಿಯನ್ನು ತನಗೆ ಮದುವೆ ಮಾಡಿಕೊಡುವಂತೆ ಆಕೆಯ ಪೋಷಕರ ಮೇಲೂ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. 30 ವರ್ಷದ ಶಿಕ್ಷಕ ಇದೀಗ ಪೊಲೀಸರ ವಶದಲ್ಲಿದ್ದು, ವೃತ್ತಿಯಿಂದಲೂ ಅಮಾನತುಗೊಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments