Webdunia - Bharat's app for daily news and videos

Install App

ನೂರಾರು ಜನರ ಸಮ್ಮುಖದಲ್ಲಿ ಮಹಿಳಾ ಸಹೋದ್ಯೋಗಿಗೆ ಇರಿದು ಕೊಂದ ಶಿಕ್ಷಕ

Webdunia
ಶುಕ್ರವಾರ, 29 ಏಪ್ರಿಲ್ 2016 (09:27 IST)
ಖಾಸಗಿ ಶಾಲೆಯ ಶಿಕ್ಷಕನೊಬ್ಬ ತನ್ನ ಮಹಿಳಾ ಸಹೋದ್ಯೋಗಿಗೆ ಚಾಕುವಿನಿಂದ ಇರಿದು ಕೊಂದ ಘಟನೆ ಉದೈಪುರದಲ್ಲಿ ನಡೆದಿದೆ. ಅವರಿಬ್ಬರ ನಡುವೆ ಪ್ರೇಮ ಸಂಬಂಧವಿತ್ತು ಎಂದು ಹೇಳಲಾಗುತ್ತಿದೆ. 
 
ನೂರಾರು ಜನರ ಸಮ್ಮುಖದಲ್ಲಿ ಮಾರುಕಟ್ಟೆ ಈ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಹಲ್ಲೆಗೊಳಗಾದ ಮಹಿಳೆ ಸಹಾಯಕ್ಕಾಗಿ ಚೀರಾಡುತ್ತ ಕೊನೆಯುಸಿರೆಳೆದಿದ್ದಾಳೆ.
 
ಅಷ್ಟೆಲ್ಲಾ ಜನರಿದ್ದರೂ ಒಬ್ಬರು ಕೂಡ ಮಹಿಳೆಯ ಸಹಾಯಕ್ಕೆ ಬರಲಿಲ್ಲ ಎಂದು ತಿಳಿದು ಬಂದಿದೆ. ಆಕೆಯನ್ನು ಕೊಂದ ಬಳಿಕ ತನ್ನ ಮಣಿಕಟ್ಟನ್ನು ಕೊಯ್ದುಕೊಂಡ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ಮೃತಳನ್ನು 23 ವರ್ಷದ ನೀಲಂ ಎಂದು ಗುರುತಿಸಲಾಗಿದ್ದು ಆರೋಪಿ ಪಿಯೂಷ್ ಭಂಡಾರಿ(27) ಜತೆ ಕಳೆದೊಂದು ವರ್ಷದ ಹಿಂದೆ ಆಕೆಗೆ ಪ್ರೇಮ ಸಂಬಂಧವಿತ್ತು. ಒಂದು ಮಗುವಿನ ತಾಯಿಯಾಗಿರುವ ಆಕೆ ಪತಿಯಿಂದ ದೂರವಿದ್ದಳು. ಕೆಲ ದಿನಗಳ ಹಿಂದೆ ಪಿಯೂಷ್ ಜತೆ ದೇವಸ್ಥಾನವೊಂದರಲ್ಲಿ ರಹಸ್ಯವಾಗಿ ಮದುವೆಯಾಗಿದ್ದಳು. ಇದನ್ನು ಬಹಿರಂಗ ಪಡಿಸಿರಲಿಲ್ಲ. ಪಿಯೂಷ್ ಅಧಿಕೃತವಾಗಿ ಮದುವೆಯಾಗೋಣ ಎಂದು ಒತ್ತಾಯಿಸತೊಡಗಿದಾಗ ಆಕೆ ಅದನ್ನು ನಿರಾಕರಿಸಿದ್ದಳು ಮತ್ತು ಇತ್ತೀಚಿಗೆ ಆತನಿಂದ ದೂರವಿರತೊಡಗಿದ್ದಳು. ಈ ಕಾರಣಕ್ಕೆ ಪಿಯೂಷ್ ಆಕೆಯನ್ನು ಕೊಲ್ಲುವ ನಿರ್ಧಾರ ಕೈಗೊಂಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments