Webdunia - Bharat's app for daily news and videos

Install App

ಪ್ರತೀಕಾರ: ತಾತನನ್ನು ಕೊಂದಿದ್ದಕ್ಕೆ ಸಾಮೂಹಿಕ ಅತ್ಯಾಚಾರ

Webdunia
ಸೋಮವಾರ, 4 ಜುಲೈ 2016 (12:10 IST)
ಮಕ್ಕಳು ಅಪರಾಧದ ಜಗತ್ತಿಗೆ ಈ ಪರಿಯಲ್ಲಿ ತೆರೆದುಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಮತ್ತೊಂದು ಸಿಗಲಾರದು. 14 ವರ್ಷದ ಹಿಂದೆ ತಮ್ಮ ತಾತನನ್ನು ಕೊಲೆಗೈದ ವ್ಯಕ್ತಿಯ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ಫಿರೋಜಾಬಾದ್‌ನಲ್ಲಿ ನಡೆದಿದೆ. ಮತ್ತೂ ಕಳವಳಕಾರಿ ಸಂಗತಿ ಎಂದರೆ ಅಪರಾಧ ಎಸಗಿದವರು ಮತ್ತು ಬಲಿಪಶು ಅಪ್ರಾಪ್ತರಾಗಿದ್ದಾರೆ. 
10 ವರ್ಷದ ಬಾಲಕಿ(ಪೀಡಿತೆ) ತಾತ ಕಳೆದ 14 ವರ್ಷದ ಹಿಂದೆ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದ. ಆಗಿನ್ನು ಹಸಿಗೂಸಾಗಿದ್ದ  ಆತನ ಮೊಮ್ಮಗ 14 ವರ್ಷದ ಬಳಿಕ ತನ್ನ ಗೆಳೆಯನ ಜತೆ ಸೇರಿ ತಾತನ ಕೊಲೆಯ ಸೇಡನ್ನು ತೀರಿಸಿಕೊಂಡಿದ್ದಾನೆ. ಆರೋಪಿಗಳಿಬ್ಬರು 14 ಮತ್ತು 15 ವರ್ಷದವರಾಗಿದ್ದಾರೆ.
 
ಬಾಲಕಿಯನ್ನು ಪೊದೆಯೊಳಗೆ ಎಳೆಯೊಯ್ದ ಬಾಲಕರು ಬಾಯಿ ಕಟ್ಟಿ ಅತ್ಯಾಚಾರವೆಸಗಿದ್ದಾರೆ. ಮಗಳು ನಾಪತ್ತೆಯಾಗಿದ್ದಾಳೆ ಎಂದು ಹುಡುಕುತ್ತ ಬಂದ ತಾಯಿಗೆ ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಸ್ಥಿತಿಯಲ್ಲಿ ಕಂಡು ಬಂದಿದೆ. 
 
ಹಿಂಸೆ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡುತ್ತದೆ ಎನ್ನುತ್ತಾರೆ. ಆದರೆ ಈ ರೀತಿಯ ಪ್ರಕರಣವನ್ನು ನಾನು ಜೀವನದಲ್ಲಿ ಎಂದೂ ಕೇಳಿರಲಿಲ್ಲ, ನೋಡಿರಲಿಲ್ಲ ಎನ್ನುತ್ತಾರೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿ ಪ್ರದೀಪ್ ಯಾದವ್.
 
ತನ್ನ ತಾತನ ಕೊಲೆಗೆ ಪ್ರತೀಕಾರ ತೆಗೆದುಕೊಳ್ಳಲು ತಾನು ಈ ಕೃತ್ಯವನ್ನೆಸಗಿರುವುದಾಗಿ ಆರೋಪಿಗಳಲ್ಲಿ ಒಬ್ಬ ಬಾಯ್ಬಿಟ್ಟಿದ್ದಾನೆ.
 
ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಆಗ್ರಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕುಟುಂಬದರ ನಡುವೆ ಗಲಾಟೆಯಾಗಬಹುದೆಂಬ ಮುನ್ನಚ್ಚೆರಿಕೆಯಿಂದ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

ಇರಾನ್‌ ಮೇಲೆ ಅಮೆರಿಕಾ ಏರ್‌ಸ್ಟ್ರೇಕ್: ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೋನಾಲ್ಡ್‌ ಟ್ರಂಪ್‌

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments