Webdunia - Bharat's app for daily news and videos

Install App

ವಿಚ್ಛೇದನಕ್ಕಾಗಿ ಕುಟುಂಬದವರ ಜತೆಯೇ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ರಂಪಾಟ

Webdunia
ಭಾನುವಾರ, 11 ನವೆಂಬರ್ 2018 (09:42 IST)
ಪಾಟ್ನಾ: ಮದುವೆಯಾದ ಆರೇ ತಿಂಗಳಿಗೆ ಪತ್ನಿ ಐಶ್ವರ್ಯಾ ರೈಗೆ ವಿಚ್ಛೇದನ ನೀಡಲು ಮುಂದಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಇದೀಗ ವಿಚ್ಛೇದನಕ್ಕಾಗಿ ಪಟ್ಟು ಹಿಡಿದು ಕೂತಿದ್ದಾರೆ.

ಪತ್ನಿಗೆ ವಿಚ್ಛೇದನ ನೀಡುವ ತಮ್ಮ ನಿರ್ಧಾರವನ್ನು ಬೆಂಬಲಿಸದಿದ್ದರೆ ಮನೆಗೇ ಬರುವುದಿಲ್ಲ ಎಂದು ತೇಜ್ ಪ್ರತಾಪ್ ರಂಪಾಟ ಮಾಡುತ್ತಿದ್ದು, ಹೋಟೆಲ್ ಒಂದರಲ್ಲಿ ತಂಗಿದ್ದಾರೆ ಎನ್ನಲಾಗಿದೆ.

ನನ್ನ ಹಾಗೂ ಐಶ್ವರ್ಯಾ ನಡುವಿನ ಬಿರುಕು ಮರಳಿ ಸರಿಪಡಿಸಲಾಗದ್ದು. ಹೀಗಾಗಿ ನನಗೆ ವಿಚ್ಛೇದನ ಬೇಕೇ ಬೇಕು. ಇದನ್ನು ಬೆಂಬಲಿಸುವವರೆಗೆ ನಾನು ಮನೆಗೆ ಮರಳುವುದಿಲ್ಲ ಎಂದು ತೇಜ್ ಪ್ರತಾಪ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬೇಡಿಕೆ ಮುಂದಿಟ್ಟಿದ್ದಾರೆ.

ಆದರೆ ತೇಜ್ ಪ್ರತಾಪ್ ನಿರ್ಧಾರದ ಬಗ್ಗೆ ಕುಟುಂಬದವರಲ್ಲಿ ಅಸಮಾಧಾನವಿದೆ ಎನ್ನಲಾಗಿದೆ. ಈ ನಡುವೆ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲೂ ಪ್ರಸಾದ್ ಯಾದವ್ ಅನಾರೋಗ್ಯದ ನಿಮಿತ್ತ ರಾಂಚಿಯ ಆಸ್ಪತ್ರೆಯಲ್ಲಿದ್ದು, ಪುತ್ರನ ವೈವಾಹಿಕ ಜೀವನ ಮುರಿದು ಬಿದ್ದ ವಿಚಾರ ಅವರ ಆರೋಗ್ಯವನ್ನು ಮತ್ತಷ್ಟು ಹದಗೆಡಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments