Webdunia - Bharat's app for daily news and videos

Install App

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ʻತೇಜಸ್ʼ- 4 ತಿಂಗಳಲ್ಲಿ 7ನೇ ಚೀತಾ ಸಾವು!

Webdunia
ಬುಧವಾರ, 12 ಜುಲೈ 2023 (09:54 IST)
ಭೋಪಾಲ್ : ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿದ್ದ ಚೀತಾಗಳ ಪೈಕಿ ʻತೇಜಸ್ʼ ಹೆಸರಿನ ಮತ್ತೊಂದು ಗಂಡು ಚೀತಾ ಸಾವನ್ನಪ್ಪಿದ್ದು, 4 ತಿಂಗಳಲ್ಲಿ ಇದು 7ನೇ ಪ್ರಕರಣವಾಗಿದೆ.
 
ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಚಿರತೆಯ ಕತ್ತಿನ ಮೇಲ್ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಇದನ್ನು ಗಮನಿಸಿದ ಮೇಲ್ವಿಚಾರಣಾ ತಂಡ ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದೆ. ನಂತರ ವೈದ್ಯರು ಪ್ರಾಣಿಯನ್ನ ಪರೀಕ್ಷಿಸಿ ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ʻತೇಜಸ್ʼ ಮೃತಪಟ್ಟಿದೆ. ಕಳೇಬರವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪ್ರಧಾನ ಅರಣ್ಯ ಸರಂಕ್ಷಣಾಧಿಕಾರಿ ಜೆ.ಎಸ್ ಚೌಹಾಣ್ ತಿಳಿಸಿದ್ದಾರೆ. 

ಕಳೆದ ಮಾರ್ಚ್ 27ರಂದು ಸಾಶಾ ಹೆಸರಿನ ಹೆಣ್ಣು ಚೀತಾ ಕಿಡ್ನಿ ಸೋಂಕಿನಿಂದ ಸಾವನ್ನಪ್ಪಿತ್ತು, ಏಪ್ರಿಲ್ 23ರಂದು ಉದಯ್ ಹೆಸರಿನ ಗಂಡು ಚೀತಾ ಶ್ವಾಸಕೋಶದ ವೈಫಲ್ಯದಿಂದ, ಮೇ 9ರಂದು ದಕ್ಷಾ0 ಹೆಸರಿನ ಹೆಣ್ಣು ಚೀತಾ ಬೇಟೆಯಾಡುವ ವೇಳೆ ಗಾಯಗೊಂಡು ಮೃತಪಟ್ಟಿತ್ತು. ಆ ನಂತರ ವಿವಿಧ ಕಾರಣದಿಂದ ಮೂರು ಚೀತಾ ಮರಿಗಳು ಮೃತಪಟ್ಟಿದ್ದವು. ಒಟ್ಟು 6 ಚೀತಾ ಸಾವನ್ನಪ್ಪಿದರೂ ಅರಣ್ಯ ಇಲಾಖೆ ಹಾಗೂ ಸರ್ಕಾರ ಆರೋಪಗಳನ್ನ ತಳ್ಳಿಹಾಕಿತ್ತು. ಇದೀಗ 7ನೇ ಚೀತಾ ಸಾವನ್ನಪ್ಪಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments