Webdunia - Bharat's app for daily news and videos

Install App

ನವರಾತ್ರಿ ವೇಳೆ ಫಿಶ್ ತಿಂದ ತೇಜಸ್ವಿಯಾದವ್: ಬಿಜೆಪಿ ಟೀಕೆ

Krishnaveni K
ಬುಧವಾರ, 10 ಏಪ್ರಿಲ್ 2024 (12:54 IST)
Photo Courtesy: Twitter
ಪಾಟ್ನಾ: ನವರಾತ್ರಿ ಸಂದರ್ಭದಲ್ಲಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಮೀನಿನ ಖಾದ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ತೇಜಸ್ವಿ ಸೀಸನಲ್ ಸನಾತಿನಿ ಎಂದು ಬಿಜೆಪಿ ಟೀಕಿಸಿದೆ.

ನವರಾತ್ರಿ ಸಂದರ್ಭದಲ್ಲಿ ಮೀನಿನ ಊಟ ಮಾಡಿ ತೇಜಸ್ವಿ ತನ್ನದೇ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಟೀಕಿಸಿದ್ದಾರೆ. ತೇಜಸ್ವಿ ಯಾದವ್ ಮತ್ತು ವಿಕಾಸ್ ಶೀಲ್ ಇನ್ ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹ್ನಿ ಹೆಲಿಕಾಪ್ಟರ್ ನಲ್ಲಿ ಮೀನು ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಗಿರಿರಾಜ್ ಸಿಂಗ್ ‘ತೇಜಸ್ವಿ ಯಾದವ್ ಸೀಸನಲ್ ಸನಾತನಿ. ಅವರ ತಂದೆ ಲಾಲು ಯಾದವ್ ಅಧಿಕಾರದಲ್ಲಿದ್ದಾಗ ರೊಹಿಂಗ್ಯಾಗಳು, ಬಾಂಗ್ಲಾದೇಶೀ ಒಳನುಸುಳುಕೋರರು ಇಲ್ಲಿಗೆ ಬಂದು ಆಶ‍್ರಯ ಪಡೆದಿದ್ದರು. ಸನಾತನ ಮುಖವಾಡ ಧರಿಸಿ ರಾಜಕೀಯ ಮಾಡುತ್ತಾರೆ’ ಎಂದು ಟೀಕಿಸಿದ್ದಾರೆ.

‘ಕೆಲವರು ಸನಾತನ ಧರ್ಮದ ಪುತ್ರರು ಎಂಬಂತೆ ಪೋಸ್ ಕೊಡುತ್ತಾರೆ. ಆದರೆ ಸನಾತನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದಿಲ್ಲ. ಮೀನಿನ ಊಟ ಮಾಡಿದ್ದನ್ನು ನಾನು ವಿರೋಧಿಸುತ್ತಿಲ್ಲ, ಆಹಾರ ಅವರ ಆಯ್ಕೆ. ಆದರೆ ನವರಾತ್ರಿ ಸಂದರ್ಭದಲ್ಲಿ ಮೀನು ತಿನ್ನುವ ವಿಡಿಯೋ ಪ್ರಕಟಿಸುವುದು ರಾಜಕೀಯ ಗಿಮಿಕ್’ ಎಂದು ಗಿರಿರಾಜ್ ಸಿಂಗ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments