ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

Krishnaveni K
ಗುರುವಾರ, 31 ಜುಲೈ 2025 (16:32 IST)

ನವದೆಹಲಿ: ಭಾರತವನ್ನು ಡೆಡ್ ಎಕಾನಮಿ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಡಿಶಾಪ ಹಾಕಿದ್ದಕ್ಕೆ ಪ್ರತಿಕ್ರಿಯಿಸಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸರಿಯಾಗಿಯೇ ಹೇಳಿದ್ದಾರೆ, ಭಾರತದ ಆರ್ಥಿಕತೆ ಸತ್ತಿದೆ ಎಂದಿದ್ದಾರೆ. ಇದಕ್ಕೆ ತೇಜಸ್ವಿ ಸೂರ್ಯ ಕಾಮೆಂಟ್ ಮಾಡಿದ್ದು, ಈತ ಭಾರತಕ್ಕೆ ಎಂಥಾ ದೌರ್ಭಾಗ್ಯ ಎಂದಿದ್ದಾರೆ.

ಭಾರತಕ್ಕೆ ಭಾರೀ ಪ್ರಮಾಣದಲ್ಲಿ ಸುಂಕ ಘೋಷಿಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಆರ್ಥಿಕತೆ ಸತ್ತ ಆರ್ಥಿಕತೆ. ಆ ದೇಶಗಳು ನಶಿಸಿಹೋಗಲಿವೆ ಎಂದು ಹಿಡಿಶಾಪ ಹಾಕಿದ್ದಾರೆ. ಟ್ರಂಪ್ ಹೇಳಿಕೆ ಬಗ್ಗೆ ಮಾಧ್ಯಮಗಳ ಮುಂದೆ ರಾಹುಲ್ ಪ್ರತಿಕ್ರಿಯಿಸಿದ್ದಾರೆ.

‘ಹೌದು ಟ್ರಂಪ್ ಸರಿಯಾಗಿಯೇ ಹೇಳಿದ್ದಾರೆ. ಪ್ರಧಾನ ಮಂತ್ರಿ ಮತ್ತು ವಿತ್ತ ಸಚಿವೆಗೆ ಬಿಟ್ಟು ಎಲ್ಲರಿಗೂ ಗೊತ್ತು, ಭಾರತದ ಆರ್ಥಿಕತೆ ಸತ್ತು ಹೋಗಿದೆ. ಡೊನಾಲ್ಡ್ ಟ್ರಂಪ್ ಸತ್ಯ ಹೇಳಿದ್ದಕ್ಕೆ ನನಗೆ ಸಂತೋಷವಾಗಿದೆ. ಭಾರತದ ಆರ್ಥಿಕತೆ ಸತ್ತಿದೆ ಎಂದು ಇಡೀ ವಿಶ್ವಕ್ಕೇ ಗೊತ್ತು. ಅದಾನಿ ಜೊತೆ ಸೇರಿಕೊಂಡು ಬಿಜೆಪಿ ಭಾರತದ ಆರ್ಥಿಕತೆಯನ್ನು ಬರ್ಬಾದ್ ಮಾಡಿದೆ’ ಎಂದಿದ್ದಾರೆ.

ರಾಹುಲ್ ಹೇಳಿಕೆ ಬಗ್ಗೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಈತ ನಮ್ಮ ದೇಶದಲ್ಲಿರುವುದು ಎಂಥಾ ದೌರ್ಭಾಗ್ಯ. ಭಾರತವನ್ನು ಯಾರಾದರೂ ತೆಗಳಿದರೂ ಈ ವ್ಯಕ್ತಿಗೆ ಸಂತೋಷ ಸಿಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments