Webdunia - Bharat's app for daily news and videos

Install App

ತೆಲಂಗಾಣ ಗವರ್ನರ್‌ ತಮಿಳಿಸೈ ದಿಢೀರ್‌ ರಾಜೀನಾಮೆ: ಲೋಕಸಭೆ ಚುನಾವಣಾ ಕಣಕ್ಕೆ ಸಾಧ್ಯತೆ

Sampriya
ಸೋಮವಾರ, 18 ಮಾರ್ಚ್ 2024 (14:00 IST)
Photo Courtesy X
ತೆಲಂಗಾಣ: ತೆಲಂಗಾಣ ಮತ್ತು ಪುದುಚೇರಿ ಗವರ್ನರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳಿಸೈ ಸೌಂದರರಾಜನ್ ಅವರು ಸೋಮವಾರ ಎರಡೂ ರಾಜ್ಯಗಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದು, ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.
 
ತಮಿಳುಸೈ ಸೌಂದರರಾಜನ್ ಅವರು ತೆಲಂಗಾಣ ರಾಜ್ಯಪಾಲರಾಗಿ ನೇಮಕವಾಗುವ ಮೊದಲು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆಯಾಗಿದ್ದರು. ಇದೀಗ ಮತ್ತೆ ಅವರು ಸಕ್ರಿಯ ರಾಜಕಾರಣಕ್ಕೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
62 ವರ್ಷದ ತಮಿಳುಸೈ ಅವರು 2019ರ ನವೆಂಬರ್‌ನಲ್ಲಿ ತೆಲಂಗಾಣದ ಎರಡನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದರು. ನಂತರ ಫೆಬ್ರವರಿ 2021ರಲ್ಲಿ ಅವರಿಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿತ್ತು.
 
ತಮಿಳುಸೈ 2019ರ ಚುನಾವಣೆಯಲ್ಲಿಯೂ ತೂತುಕುಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಡಿಎಂಕೆಯ ಕನಿಮೋಳಿ ಕರುಣಾನಿಧಿ ವಿರುದ್ಧ ಸ್ಪರ್ಧಿಸಿದ್ದ ಅವರು ಈ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದರು. ಕನಿಮೋಳಿ 5,63,143 ಮತಗಳನ್ನು ಗಳಿಸಿದರೆ, ಸೌಂದರರಾಜನ್‌ ಕೇವಲ 2,15,934 ಮತಗಳನ್ನು ಗಳಿಸಿ, 3,47,209 ಮತಗಳ ಭಾರಿ ಅಂತರದಿಂದ ಸೋಲೊಪ್ಪಿಕೊಂಡಿದ್ದರು. ಮತ್ತೆ ಅದೇ ಕ್ಷೇತ್ರದಲ್ಲಿ ಅವರು ಕನಿಮೋಳಿ ವಿರುದ್ಧ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments