Webdunia - Bharat's app for daily news and videos

Install App

ಅಧಿಕಾರಕ್ಕೇರುವವರೆಗೆ ಗಡ್ಡ ಬೋಳಿಸಲಾರೆ: 'ಕೈ' ನಾಯಕನ ಪ್ರತಿಜ್ಞೆ

Webdunia
ಮಂಗಳವಾರ, 25 ಅಕ್ಟೋಬರ್ 2016 (18:33 IST)
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾದ ಗದ್ದುಗೆಗೆ ಏರುವವರೆಗೆ ಗಡ್ಡ ಬೋಳಿಸುವುದಿಲ್ಲವೆಂದು ತೆಲಂಗಾಣ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಎನ್. ಉತ್ತಮ್ ಕುಮಾರ್ ರೆಡ್ಡಿ ಪ್ರತಿಜ್ಞೆಗೈದಿದ್ದಾರೆ. 

ವಾಯುಸೇನೆಯ ಉನ್ನತ ಅಧಿಕಾರಿಯಾಗಿದ್ದ ನೀವು ಸದಾ ಶೇವ್ ಮಾಡಿಕೊಂಡು ಟ್ರಿಮ್ ಆಗಿರುತ್ತಿದ್ರಿ, ಮತ್ತೆ ಈಗ್ಯಾಕೆ ಹೀಗೆ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕೈ ಅಧಿಕಾರಕ್ಕೇರುವವರೆಗೆ ನಾನು ಗಡ್ಡ ಕತ್ತರಿಸುವುದಿಲ್ಲ ಎಂದಿದ್ದಾರೆ. 
 
"ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೇರುವುದು ನಿಶ್ಚಿತ. ಅಲ್ಲಿಯವರೆಗೂ ನಾನು ಗಡ್ಡ ಬೋಳಿಸುವುದಿಲ್ಲ ಇದು (ಬೆಳೆಯುತ್ತಿರುವ ಗಡ್ಡ) ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ,"  ಎನ್ನುತ್ತಾರೆ ಉತ್ತರ್ ಕುಮಾರ್ ರೆಡ್ಡಿ.
 
ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಮಕಾಡೆ ಮಲಗಿತ್ತು. 119 ಸ್ಥಾನಗಳಲ್ಲಿ ಕೇವಲ 21 ಸ್ಥಾನಗಳನ್ನಷ್ಟೇ ಗೆಲ್ಲಲು ಕಾಂಗ್ರೆಸ್ ಸಫಲವಾಗಿತ್ತು. ಉತ್ತಮ್ ಕುಮಾರ್ ರೆಡ್ಡಿ ನಲ್ಗೊಂಡಾ ಜಿಲ್ಲೆಯಿಂದ ಆಯ್ಕೆಯಾಗಿದ್ದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments