Webdunia - Bharat's app for daily news and videos

Install App

ದೆಹಲಿ ಕೇಜ್ರಿವಾಲ್‌ಗೆ ತಾತ್ಕಾಲಿಕ ರಿಲೀಫ್: ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

Sampriya
ಶುಕ್ರವಾರ, 10 ಮೇ 2024 (14:48 IST)
ನವದೆಹಲಿ:  ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ಹಂತದ ಮತದಾನ ಬಾಕಿಯಿರುವಾಗ ಜೂನ್ 1 ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ದೆಹಲಿ ಮದ್ಯದ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಜೂನ್ 2 ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗುವಂತೆ ಷರತ್ತು ಬದ್ಧ ಜಾಮೀನು ನೀಡಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ನೀಡಿದ ಷರತ್ತುಗಳು ಕೇಜ್ರಿವಾಲ್‌ಗೂ ಅನ್ವಯಿಸಲಿದೆ ಎಂದು ನ್ಯಾಯಾಲಯ ಹೇಳಿದೆ.

ಇಡಿ ತನ್ನ ಬಂಧನವನ್ನು ಪ್ರಶ್ನಿಸಿ ಮೂಲತಃ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದ ಎಎಪಿ ಮುಖ್ಯಸ್ಥರ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಚುನಾವಣಾ ಫಲಿತಾಂಶ ಪ್ರಕಟವಾಗುವ ಜೂನ್ 4 ರವರೆಗೆ ಮಧ್ಯಂತರ ಜಾಮೀನು ಕೋರಿದರು. ಆದಾಗ್ಯೂ, ಇದನ್ನು ನಿರಾಕರಿಸಲಾಯಿತು, ಏಳನೇ ಮತ್ತು ಅಂತಿಮ ಹಂತದ ಪ್ರಚಾರವನ್ನು ಮತದಾನಕ್ಕೆ 48 ಗಂಟೆಗಳ ಮೊದಲು ನಿಲ್ಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments