Webdunia - Bharat's app for daily news and videos

Install App

ದೆಹಲಿ ಕೇಜ್ರಿವಾಲ್‌ಗೆ ತಾತ್ಕಾಲಿಕ ರಿಲೀಫ್: ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

Sampriya
ಶುಕ್ರವಾರ, 10 ಮೇ 2024 (14:48 IST)
ನವದೆಹಲಿ:  ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ಹಂತದ ಮತದಾನ ಬಾಕಿಯಿರುವಾಗ ಜೂನ್ 1 ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ದೆಹಲಿ ಮದ್ಯದ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಜೂನ್ 2 ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗುವಂತೆ ಷರತ್ತು ಬದ್ಧ ಜಾಮೀನು ನೀಡಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ನೀಡಿದ ಷರತ್ತುಗಳು ಕೇಜ್ರಿವಾಲ್‌ಗೂ ಅನ್ವಯಿಸಲಿದೆ ಎಂದು ನ್ಯಾಯಾಲಯ ಹೇಳಿದೆ.

ಇಡಿ ತನ್ನ ಬಂಧನವನ್ನು ಪ್ರಶ್ನಿಸಿ ಮೂಲತಃ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದ ಎಎಪಿ ಮುಖ್ಯಸ್ಥರ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಚುನಾವಣಾ ಫಲಿತಾಂಶ ಪ್ರಕಟವಾಗುವ ಜೂನ್ 4 ರವರೆಗೆ ಮಧ್ಯಂತರ ಜಾಮೀನು ಕೋರಿದರು. ಆದಾಗ್ಯೂ, ಇದನ್ನು ನಿರಾಕರಿಸಲಾಯಿತು, ಏಳನೇ ಮತ್ತು ಅಂತಿಮ ಹಂತದ ಪ್ರಚಾರವನ್ನು ಮತದಾನಕ್ಕೆ 48 ಗಂಟೆಗಳ ಮೊದಲು ನಿಲ್ಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

ಮುಂದಿನ ಸುದ್ದಿ
Show comments