Select Your Language

Notifications

webdunia
webdunia
webdunia
webdunia

ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾಧವ್‌ ಪ್ರಕರಣ: ತನಿಖೆಯಲ್ಲಿ ಬಯಲಾಯಿತು ಮಹಾಸತ್ಯ

ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಕೇಸ್

Sampriya

ಗುರುಗ್ರಾಮ , ಶನಿವಾರ, 12 ಜುಲೈ 2025 (22:47 IST)
ಗುರುಗ್ರಾಮ: ಹರಿಯಾಣದಲ್ಲಿ ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ತಂದೆಯೇ ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣ ಸಂಬಂಧ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಆಕೆ ಸ್ವಂತ ಅಕಾಡೆಮಿ ಹೊಂದಿರಲಿಲ್ಲ. 

ಮಗಳ ಆದಾಯದಿಂದ ಬದುಕು ಕಟ್ಟುತ್ತಿದ್ದಾನೆಂಬ ನೆರೆಹೊರೆಯವರ ನಿಂದನೆಯಿಂದ ರಾಜ್ಯ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾಳನ್ನು ತಂದೆಯೇ ಗುಂಡಿಕ್ಕಿ ಕೊಂದಿದ್ದರು. ಈ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿತ್ತು. 

ಇದೀಗ ತನಿಖೆ ವೇಳೆ ಸಿಕ್ಕಿರುವ ಮಾಹಿತಿ ಪ್ರಕಾರ ಹರಿಯಾಣದ ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್‌ ಸ್ವಂತ ಅಕಾಡೆಮಿ ಹೊಂದಿರಲಿಲ್ಲ. ಕಲಿಕಾರ್ಥಿಗಳಿಗೆ ವಿವಿಧ ಪ್ರದೇಶದಲ್ಲಿರುವ ಟೆನ್ನಿಸ್‌ ಮೈದಾನಗಳಲ್ಲಿ ತರಬೇತಿ ನೀಡುತ್ತಿದ್ದರು. ಇದಕ್ಕೂ ಆಕೆಯ ತಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಗುರುಗ್ರಾಮದ ಪೊಲೀಸರು ತಿಳಿಸಿದ್ದಾರೆ.

ಗುರುಗ್ರಾಮದ ಸುಶಾಂತ್‌ ಲೋಕ್‌ ಪ್ರದೇಶದಲ್ಲಿರುವ ಎರಡು ಮಹಡಿಯ ಕಟ್ಟಡದಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದ ರಾಧಿಕಾ ಅವರನ್ನು ತಂದೆ ದೀಪಕ್‌ ಯಾದವ್‌ ಗುಂಡಿಕ್ಕಿ ಹತ್ಯೆ ಮಾಡಿದ್ದರು.

ವಿವಿಧ ಕಟ್ಟಡಗಳ ಬಾಡಿಗೆಯಿಂದ ಸಾಕಷ್ಟು ಆದಾಯ ಪಡೆಯುತ್ತಿದ್ದ ಅವರು, ಮಗಳ ದುಡಿಮೆ ಮೇಲೆ ಅವಲಂಬಿತರಾಗಿ ಇರಲಿಲ್ಲ. ಅಕಾಡೆಮಿಗಳಲ್ಲಿ ತರಬೇತಿ ಮೂಲಕ ಮಗಳು ಹಣ ಸಂಪಾದಿಸುತ್ತಿದ್ದ ವಿಚಾರಕ್ಕೆ ಹಲವು ಸಲ ಆಕ್ಷೇಪ ವ್ಯಕ್ತಪಡಿಸಿದ್ದರು. ತರಬೇತಿ ಸ್ಥಗಿತಗೊಳಿಸಲು ಮಗಳು ಕೂಡ ಒಪ್ಪಿರಲಿಲ್ಲ. ಈ ವಿಚಾರವೇ ಇಬ್ಬರ ನಡುವೆ ಮನಃಸ್ತಾಪಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದರು. 

ಸೆಕ್ಟರ್‌ 56ರ ಪೊಲೀಸ್‌ ಠಾಣಾ ಇನ್‌ಸ್ಪೆಕ್ಟರ್‌ ವಿನೋದ್‌ ಕುಮಾರ್‌ ನೀಡಿದ ಸ್ಪಷ್ಟೆ ಪ್ರಕಾರ 2023 ರಲ್ಲಿ ರಾಧಿಕಾ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ವಿಡಿಯೊಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ. ತರಬೇತಿಯ ಮೂಲಕ ಮಗಳು ಸಂಪಾದನೆ ಮಾಡುವುದನ್ನು ನೋಡಲು ತಂದೆ ಬಯಸಿರಲಿಲ್ಲ ಎಂದು ಹೇಳಿದ್ದಾರೆ. 

ರಾಧಿಕಾಳ ಹಿಂಬದಿಯಿಂದ ಮೂರು ಹಾಗೂ ಭುಜಕ್ಕೆ ಒಂದು ಗುಂಡು ತಗುಲಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಂತ್ಯಕ್ರಿಯೆಯು ಶುಕ್ರವಾರ ಕುಟುಂಬಸ್ಥರ ಸ್ವಗ್ರಾಮ ವಾಜೀರಾಬಾದ್‌ನಲ್ಲಿ ನಡೆಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ 9 ಲಕ್ಷದ ವಿದೇಶಿ ಕರೆನ್ಸಿ ಹೊಂದಿದ್ದ ಇಬ್ಬರು ಅರೆಸ್ಟ್‌