Select Your Language

Notifications

webdunia
webdunia
webdunia
webdunia

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

Cloudburst at Baligarh, National Disaster Management Force, Barkot-Yamunotri Road

Sampriya

ಉತ್ತರಾಖಂಡ , ಭಾನುವಾರ, 29 ಜೂನ್ 2025 (09:37 IST)
Photo Credit X
ಉತ್ತರಾಖಂಡ: ಇಲ್ಲಿನ ಬಾಲಿಗಢದಲ್ಲಿ ಮೇಘಸ್ಫೋಟ ಉಂಟಾಗಿದೆ. ಹಠಾತ್‌ ಪ್ರವಾಹ ಉಂಟಾಗಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟ ಉಂಟಾಗಿದೆ.

ಕಳೆದರೆಡು ದಿನಗಳಿಂದ ಉತ್ತರಾಖಂಡದ ಹಲವು ಭಾಗಗಳಲ್ಲಿವ್ಯಾಪಕ ಮಳೆಯಾಗುತ್ತಿದೆ. ಗುಡ್ಡದ ಮಣ್ಣು ಮತ್ತು ಇತರೆ ಅವಶೇಷಗಳು ರಸ್ತೆಗೆ ಬೀಳುತ್ತಿರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ. 

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಈಚೆಗೆ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಯಾತ್ರಿಕರು ಮೃತಪಟ್ಟಿದ್ದು, ಓರ್ವನನ್ನು ರಕ್ಷಿಸಲಾಗಿತ್ತು. ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿರುವ ಜಲವಿದ್ಯುತ್‌ ಯೋಜನಾ ಸ್ಥಳದಲ್ಲಿ ಸಂಭವಿಸಿದ್ದ ಹಠಾತ್‌ ಪ್ರವಾಹದಿಂದಾಗಿ ನಾಲ್ವರು ಸಾವಿಗೀಡಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ